ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆಯ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಿದೆ. ಇದೀಗ ಹೊರಬಿದ್ದಿರುವ ಅತ್ಯಂತ ಪ್ರಮುಖ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಮಹಿಳೆಯರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.


ಹೊಸ ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಗೊಂದಲದಲ್ಲಿದ್ದ ಸಾರ್ವಜನಿಕರಿಗೆ ಇಲಾಖೆಯು ಸ್ಪಷ್ಟನೆ ನೀಡಿದೆ. ಈ ಬಾರಿ ಎಲ್ಲೆಂದರಲ್ಲಿ ಅಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದಕ್ಕೆ ಸರಕಾರವು ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹತೆಯನ್ನು ಪರಿಶೀಲಿಸಲು ಹಲವು ಕಠಿಣ ಷರತ್ತುಗಳನ್ನು ವಿಧಿಸಿದೆ.
ಸರಕಾರದ ನೂತನ ಮಾರ್ಗಸೂಚಿಯ ಅನುಸಾರ, ಅರ್ಜಿದಾರರು ನಿಗದಿಪಡಿಸಿದ ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಅಗತ್ಯ ದಾಖಲೆ ಜೊತೆ ತಮ್ಮ ಹೆಸರನ್ನು ನೋಂದಾಯಿಸಬೇಕು. ಯೋಜನೆಗೆ ಯಾರೆಲ್ಲ ಅರ್ಹರು, ಹಳೆಯ ಅರ್ಜಿದಾರರು ಅನುಸರಿಸಬೇಕಾದ ಕ್ರಮಗಳು ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತವಾಗಿ ಹಂಚಿಕೊಂಡಿದೆ.
ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಬಯೋಮೆಟ್ರಿಕ್ಗೆ ಆಧಾರ್ ಕಡ್ಡಾಯ ಜೊತೆಗೆ ಮಹಿಳಾ ಇಲಾಖೆ ನೀಡಿರುವ ಐಡಿ ಕೂಡಾ ಕಡ್ಡಾಯವಾಗಿದೆ. ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ಹೋಗಿ ತಮ್ಮ ಹೆಬ್ಬೆಟ್ಟು ಅಥವಾ ಕಣ್ಣುಗಳು ಅಥವಾ ಫೇಸ್ ಸ್ಕ್ಯಾನ್ ಮಾಡಬೇಕು, ನೀವು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರಾಗಿದ್ದರೆ ಆರ್ಡಿ ನಂಬರ್ ಕಡ್ಡಾಯ, ಜಾತಿ ಸರ್ಟಿಫಿಕೇಟ್ನಲ್ಲಿರುವ ಆರ್ಡಿ ನಂಬರ್ ನೀಡಿ ಸಂಪೂರ್ಣ ಫಾರ್ಮ್ ತುಂಬಿದ ನಂತರ ಗೃಹಲಕ್ಷ್ಮಿ ಹಣ ಬರಲಿದೆ.

