Home » ಸೆಪ್ಟೆಂಬರ್ ನಿಂದ ದೇಶಾದ್ಯಂತ ಹೊಸ ಆಂದೋಲನಕ್ಕೆ ಚಾಲನೆ – ಅಭಿಜಿತ್ ದೀಪ್ಕೆ ಘೋಷಣೆ!!

ಸೆಪ್ಟೆಂಬರ್ ನಿಂದ ದೇಶಾದ್ಯಂತ ಹೊಸ ಆಂದೋಲನಕ್ಕೆ ಚಾಲನೆ – ಅಭಿಜಿತ್ ದೀಪ್ಕೆ ಘೋಷಣೆ!!

0 comments

ಯುವಜನರ ಸಮಸ್ಯೆಗಳು, ಉದ್ಯೋಗ ಸೃಷ್ಟಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಆಮೂಲಾಗ್ರ ಬದಲಾವಣೆಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮುಂಬರುವ ಸೆಪ್ಟೆಂಬರ್‌ ತಿಂಗಳಿನಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ಎಂಬ ಬೃಹತ್ ರಾಷ್ಟ್ರವ್ಯಾಪಿ ಅಭಿಯಾನವನ್ನು ಘೋಷಿಸಿದ್ದಾರೆ.

 ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ದೇಶಾದ್ಯಂತ ಖ್ಯಾತಿಗಳಿಸಿದ ಕಾಕ್ರೋಚ್ ಜನತಾ ಪಾರ್ಟಿ, ಸದ್ಯದಲ್ಲೇ ರಾಜಕೀಯ ಪ್ರವೇಶಿಸಲಿದೆ, ಅದೊಂದು ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅನೇಕರು ಭಾವಿಸಿದ್ದರು. ಆದರೆ ಈ ಎಲ್ಲ ವಿಚಾರಗಳನ್ನು ಅಲ್ಲಗಳದಿರುವ ಅಭಿಜಿತ್ ದೀಪ್ತಿ ಅವರು ನಮ್ಮದು ರಾಜಕೀಯ ಪಕ್ಷವಾಗಿ ಮಾರ್ಪಡುವುದಿಲ್ಲ, ಬದಲಾಗಿ ಸರ್ಕಾರದ ಮೇಲೆ ಒತ್ತಡ ತರುವ ಕೆಲಸವನ್ನು ನಿರಂತರವಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕ್ಯಾ ಬೋಲ್ತಿ ಪಬ್ಲಿಕ್

ಪಕ್ಷದ ಎರಡು ದಿನಗಳ ಸುದೀರ್ಘ ಚಿಂತನ ಮಂಥನ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ್, ದೇಶದ ಶೇಕಡಾ 65 ರಷ್ಟು ಜನಾಂಗ 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಾಗಿದ್ದರೂ, ಮುಖ್ಯವಾಹಿನಿಯ ರಾಜಕೀಯದಲ್ಲಿ ಅವರ ದನಿಗೆ ಬೆಲೆ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಈ ‘ಕ್ಯಾ ಬೋಲ್ತಿ ಪಬ್ಲಿಕ್’ ಜನಾಭಿಪ್ರಾಯ ಸಂಗ್ರಹ ಅಭಿಯಾನದ ಮೂಲಕ ದೇಶಾದ್ಯಂತ ಸಂಚರಿಸಿ ಯುವಜನರ ಆಕಾಂಕ್ಷೆ, ನಿರೀಕ್ಷೆ ಹಾಗೂ ಅವರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಹತ್ತಿರದಿಂದ ಆಲಿಸಲಾಗುವುದು ಎಂದು ಅವರು ತಿಳಿಸಿದರು.

banner

ಡಿಗ್ರಿ ಮುಗಿಸಿದ ಶೇ. 80 ರಷ್ಟು ಯುವಕರು ಇಂದು ಸೂಕ್ತ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಬಲವಂತವಾಗಿ ಡೆಲಿವರಿ ಬಾಯ್ ಆಗುವುದು ಯಾವುದೇ ಯುವಕನ ಕನಸಾಗಿರುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಶಿಕ್ಷಣವನ್ನು ಸಾಮಾನ್ಯ ಜನರಿಗೆ ಕೈಗೆಟುಕುವಂತೆ ಮಾಡುವುದು ಹಾಗೂ ನಿರುದ್ಯೋಗವನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಿ ಸರ್ಕಾರದ ಗಮನಸೆಳೆಯುವುದು ಈ ಅಭಿಯಾನದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಪ್ರತಿಪಾದಿಸಿದರು.

You may also like