Home » Udupi: ಇಂದು ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ಇಲ್ಲ!! ಕಾರಣ ಏನು?

Udupi: ಇಂದು ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ಇಲ್ಲ!! ಕಾರಣ ಏನು?

0 comments

Udupi: ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ದೇಶದಲ್ಲೇ ಪ್ರಸಿದ್ಧ.ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಇಂದು ಕೃಷ್ಣ ಜನ್ಮಾಷ್ಟಮಿ ಉಡುಪಿ ಮಠದಲ್ಲಿ ಇಲ್ಲ.

ಹೌದು, ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ. ಕಾರಣ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.

ದೇಶದ ಬೇರೆ ಬೇರೆ ಕಡೆಗಳಲ್ಲಿ ಚಾಂದ್ರಮಾನ ಪದ್ಧತಿಯಂತೆ ಕೃಷ್ಣಾಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯಂತೆ ಕೃಷ್ಣಾಷ್ಟಮಿ ಆಚರಣೆ ಮಾಡಲಾಗುತ್ತದೆ. ಇದೇ ಕಾರಣಕ್ಕೆ ಈ ಭಿನ್ನತೆ ಕಾಣಬಹುದಾಗಿದೆ. ಹುಣ್ಣಿಮೆ-ಅಮಾವಾಸ್ಯೆಯ ಹಾಗೂ ರೋಹಿಣಿ ನಕ್ಷತ್ರದ ಆಧಾರದ ಗಣನೆಯಲ್ಲಿ ಇತರ ಆಚರಣೆ ನಡೆಯುತ್ತಿದ್ದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ.

ಆದರೆ, ಚಾಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರಧಾನ ಹಾಗೂ ಇತರ ಆಚರಣೆಗಳು ನಡೆಯಲಿವೆ.

banner

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಠದ ದಿವಾನರಾದ ಪ್ರಸನ್ನ ಆಚಾರ್ಯ ಅವರು, ಈ ಬಾರಿ ನಾವು ಚಂದ್ರ ಕೃಷ್ಣ ಜನ್ಮಾಷ್ಟಮಿ ಮತ್ತ ಸೌರಕೃಷ್ಣ ಜನ್ಮಾಷ್ಟಮಿಯನ್ನು ಅಂತ ಎರಡು ಪದ್ಧತಿಗಳಲ್ಲಿ ಈ ಬಾರಿ ಕೃಷ್ಣಜನ್ಮಾಷ್ಟಮಿಯನ್ನು ಆಚರಣೆ ಮಾಡುತ್ತಿದ್ದೇವೆ. ಇದು ಎರಡ್ಮೂರು ವರ್ಷಗಳಿಗೆ ಒಮ್ಮೆ ಬರುವ ವಿಶೇಷ ಸಂಗತಿಯಾಗಿದೆ. ಉಡುಪಿ ಮತ್ತು ಕರಾವಳಿ ಭಾಗದ ಎಲ್ಲಾ ಹಬ್ಬ ಹರಿದಿನಗಳು ಸೌರ ಕೃಷ್ಣಜನ್ಮಾಷ್ಟಮಿ ರೀತಿಯಲ್ಲಿ ಸಾಮಾನ್ಯವಾಗಿ ನಡೆಯುತ್ತವೆ ಎಂದು ತಿಳಿಸಿದ್ದಾರೆ.

Health Tips: ಹೃದ್ರೋಗ ಇರುವವರು ದಿನಕ್ಕೆ ಎಷ್ಟು ನೀರು ಕುಡಿಯುವ ಅಗತ್ಯವಿದೆ? – ತಜ್ಞ ವೈದ್ಯರು ಹೇಳುತ್ತಾರೆ?

You may also like