Home latest ಸುಪ್ರೀಂ ಕೋರ್ಟ್ ನಿಂದ ನೂಪುರ್ ಶರ್ಮಾಗೆ ಬಿಗ್ ರಿಲೀಫ್! ಬಂಧನಕ್ಕೆ ತಡೆಯಾಜ್ಞೆ

ಸುಪ್ರೀಂ ಕೋರ್ಟ್ ನಿಂದ ನೂಪುರ್ ಶರ್ಮಾಗೆ ಬಿಗ್ ರಿಲೀಫ್! ಬಂಧನಕ್ಕೆ ತಡೆಯಾಜ್ಞೆ

Hindu neighbor gifts plot of land

Hindu neighbour gifts land to Muslim journalist

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್‌ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಗಸ್ಟ್ 10ರ ವರೆಗೆ ಬಂಧಿಸದಂತೆ ಆದೇಶಿಸಿದೆ.

ನೂಪುರ್ ಶರ್ಮಾ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು, ಆಕೆಗೆ ಬಂಧನದಿಂದ ತಡೆಯಾಜ್ಞೆ ಹಾಗೂ ರಕ್ಷಣೆ ನೀಡಬೇಕು ಎಂದು ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು.

ಈ ಹಿನ್ನೆಲೆಯಲ್ಲಿ ಆಗಸ್ಟ್ 10ರವರೆಗೆ ನೂಪುರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಸೂಚಿಸಿದೆ. ಇದರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ. ಆಕೆಯ (ನೂಪುರ್) ಜೀವಕ್ಕೆ ಗಂಭೀರ ಬೆದರಿಕೆ ಇದೆ ಎಂದು ನೂಪುರ್ ಶರ್ಮಾ ಪರ ವಾದ ಮಂಡಿಸಿದ ವಕೀಲ ಮಣಿಂದರ್ ಸಿಂಗ್ ಹೇಳಿದರು. ಆದೇಶವನ್ನು ಉಚ್ಚರಿಸುವಾಗ, ಪೀಠವು ಅರ್ಜಿದಾರರ ಹತ್ಯೆಯ ಸಲ್ಮಾನ್ ಚಿಸ್ತಿಯ ವೈರಲ್ ಹೇಳಿಕೆಯನ್ನು ಸಹ ಗಮನಕ್ಕೆ ತೆಗೆದುಕೊಂಡಿತು. ಯುಪಿಯ ವ್ಯಕ್ತಿಯೊಬ್ಬರು ಅರ್ಜಿದಾರರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವುದನ್ನು ನ್ಯಾಯಾಲಯವು ಆಲಿಸಿತು.