ಶಿವಾಜಿನಗರದಲ್ಲಿ ಒತ್ತುವರಿ ತೆರವು ಕಾರ್ಯಚರಣೆ ಮಾಡೋ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ಗುಂಡಾಗಳ ರೀತಿ ಹಲ್ಲೆ ಮಾಡಿದ್ದ ಬಸವರಾಜ್ ಪಡುಕೋಟೆ ಮೇಲೆ ಈಗ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ತಮ್ಮ ಅಧಿಕಾರದ ಪವರ್ ಏನೂ ಅಂತಾ ತೋರಿಸಲು ಮುಂದಾಗಿದ್ದಾರೆ.

ಪೊಲೀಸರು ಇದ್ದರೂ ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ಹೋಗಿದ್ದ ಜಿಬಿಎ ಅಧಿಕಾರಿಗಳ ಮೇಲೆ ಬಸವರಾಜ್ ಪಡುಕೋಟೆ & ಗ್ಯಾಂಗ್ ಮನಸೋ ಇಚ್ಛೆ ಹಲ್ಲೆ ಮಾಡಿದ್ದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಸಂಘದ ಹೆಸರಲ್ಲಿ ಗಣೇಶ ಚತುರ್ಥಿ ಮಾಡೋದು, ಕನ್ನಡ ಸಂಘಟನೆಯ ಹೆಸರಲ್ಲಿ ಶಿವಾಜಿನಗರದ ಫುಟ್ಪಾತ್ನಲ್ಲಿರುವ ಅಂಗಡಿಗಳಿಂದ ಹಫ್ತಾ ವಸೂಲಿ ಮಾಡೋದು ಮಾಡುತ್ತಾ ಅದೇ ದುಡ್ಡಿನಲ್ಲಿ ಬಸವರಾಜ್ ಪಡುಕೋಣೆ ಬಿಲ್ಡಪ್ ಕೊಡುತ್ತಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸೆಲೆಬ್ರಿಟಿಗಳ ಜೊತೆಗೆ ಫೋಟೋ ಕ್ಲಿಕಿಸಿಕೊಂಡು ತಾನೊಬ್ಬ ಸೂಪರ್ ಸ್ಟಾರ್ ಎಂಬ ಫೀಲ್ನಲ್ಲಿದ್ದ ಬಸವರಾಜ್ ಈಗ ಖಾಕಿ ಬಲೆಗೆ ಬಿದ್ದಿದ್ದಾನೆ. ಆತನ ಮಗ ರಾಘು ಸೇರಿ ಒಟ್ಟು 11 ಜನರನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಜಿಬಿಎ ಅಧಿಕಾರಿಗಳು ಬಸವರಾಜ್ ಪಡುಕೋಟೆಯ ಜನ್ಮ ಜಾಲಾಡುತ್ತಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಬಳಿ ಇರುವ ನಮ್ಮ ಕರ್ನಾಟಕ ಸೇನೆಯ ಕಚೇರಿಗೆ ಬೀಗ ಹಾಕಲು ಮುಂದಾಗಿದ್ದಾರೆ. ಬಾಡಿಗೆ ಪಡೆಯುವಾಗ ಪ್ಲಬಿಂಗ್ ವಸ್ತುಗಳ ಮಾರಾಟ ಮಾಡುತ್ತೇವೆ ಎಂದು ಬಾಡಿಗೆ ಪಡೆದು ಈಗ ಕಚೇರಿ ಮಾಡಿಕೊಂಡಿರೋದು ಕಟ್ಟಡದ ಮಾಲೀಕರಿಂದ ತಿಳಿದುಬಂದಿದೆ. ಇನ್ನೂ ಕಚೇರಿಗೆ ವಾಣಿಜ್ಯ ಪರವಾನಿಗೆ ಪಡೆದಿದ್ದಾರೆ ಅನ್ನೋದನ್ನ ಪರಿಶೀಲನೆ ನಡೆಸುತ್ತಿದ್ದು, ಅಕ್ರಮ ಕಚೇರಿ ಅಂತಾ ತಿಳಿದು ಬಂದರೆ ಕಚೇರಿಯನ್ನ ಸೀಜ್ ಮಾಡುವಂತೆ ಕೂಡ ಸೂಚಿಸಿದ್ದಾರೆ. ಅಷ್ಟೇ ಅಲ್ಲ ಬಸವರಾಜ್ ಪಡುಕೋಟೆಯ ಮನೆ ಮತ್ತು ಇತರೆ ಆಸ್ತಿಗಳ ಬಗ್ಗೆಯೂ ಪರಿಶೀಲನೆ ಮಾಡುತ್ತಿದ್ದು, ಟ್ಯಾಕ್ಸ್ ಕಟ್ಟದೇ ಇದ್ದರೇ ಪ್ಲಾನ್ ಮೀರಿ ಮನೆ ನಿರ್ಮಾಣ ಮಾಡಿದ್ರೆ ಅದಕ್ಕೂ ಆಪರೇಷನ್ ಜೆಸಿಬಿ ಮಾಡಿಸುವ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

