Home » ಪುದುವೆಟ್ಟು ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ನಾಳೆಯಿಂದ

ಪುದುವೆಟ್ಟು ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ನಾಳೆಯಿಂದ

0 comments

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದ ನಿಡ್ವಾಳದಲ್ಲಿರುವ ಪ್ರಾಚೀನ ಬಸದಿಯನ್ನು ಜೀರ್ಣೋದ್ಧಾರಗೊಳಿಸಿದ್ದು ಭಗವಾನ್ ಪಾರ್ಶ್ವನಾಥ ತೀರ್ಥಂಕರ ಮೂರ್ತಿಯ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬದ ಪ್ರತಿಷ್ಠಾಮಹೋತ್ಸವವು ಫೆ.18 ರಿಂದ 22ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.

ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದ್ದು ಪೂಜ್ಯರು ಇಂದು ಮಂಗಳವಾರ ಧರ್ಮಸ್ಥಳದಿಂದ ಹೊರಟು ಪುದುವೆಟ್ಟು ಪುರಪ್ರವೇಶ ಮಾಡುವರು.
ನಾಳೆ ಬುಧವಾರ ಮುಂಜಾನೆ ಏಳು ಗಂಟೆಯಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

You may also like