Home Interesting ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ...

ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಿದ ಈ ಯೋಜನೆ ಕುರಿತು ಇಲ್ಲಿದೆ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ಕಾರವಾರ :ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಜಸ್ಟ್ ಕಾಲ್ ಮಾಡಿದ್ರೆ ಸಾಕು 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಹೌದು.ಈ ಮೂಲಕ ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಜನತೆಗೆ ಸುಲಭಮಾರ್ಗವಾಗಲಿದೆ.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್.ಅಶೋಕ್,’ಸರ್ಕಾರದ ಪಿಂಚಣಿ ಯೋಜನೆಯ ಪ್ರಯೋಜನ ಪಡೆಯಲು ಇನ್ಮುಂದೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ದೂರವಾಣಿ ಕರೆ ಮಾಡಿ ಹಲೋ ಎಂದು ಎರಡು ದಾಖಲೆಗಳ ನಂಬರ್ ಗಳನ್ನು ಕೊಟ್ಟರೆ ಸಾಕು, 72 ಗಂಟೆಯಲ್ಲಿ ಪಿಂಚಣಿ ಪ್ರಮಾಣ ಮನೆ ಬಾಗಿಲಿಗೆ ಬರಲಿದೆ. ಇಂಥ ಯೋಜನೆ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ‘ಎಂದು ತಿಳಿಸಿದ್ದಾರೆ.

ನಾಲ್ಕು ಡಿಜಿಟಲ್ ಗಳ ಟೋಲ್ ಫ್ರೀ ನಂಬರ್ ನೀಡಲಾಗುತ್ತದೆ. ಆ ನಂಬರ್ ಗೆ ಕರೆ ಮಾಡಿ ಪಿಂಚಣಿ ಫಲಾನುಭವಿಗಳಾಗುವವರ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ಸಂಖ್ಯೆ ನೀಡಬೇಕು. 15 ನಿಮಿಷಗಳಲ್ಲಿ ಆ ಮಾಹಿತಿ ಸಂಬಂಧಪಟ್ಟ ಜಿಲ್ಲಾಧಿಕಾರಿ, ತಹಸೀಲ್ದಾರ್ ಮತ್ತಿತರ ಅಧಿಕಾರಿಗೆ ಹೋಗುತ್ತದೆ. ಗ್ರಾಮ ಸಹಾಯಕರು ಅವರ ಮನೆಗೆ ತೆರಳಿ ಫಲಾನುಭವಿಯ ಫೋಟೋ, ಇತರೆ ದಾಖಲೆ ಪಡೆದು ಅಪ್ ಲೋಡ್ ಮಾಡುತ್ತಾರೆ.ಅದಾದ 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಫಲಾನುಭವಿಯ ಕೈಸೇರಲಿದೆ ಎಂದರು.