Homelatestರೈತರೇ‌ ನಿಮ್ಮ ಖಾತೆಗೆ ಸೇರಲಿದೆ 10 ಸಾವಿರ ರೂ | ಪಿಎಂ ಕಿಸಾನ್ ಇ-ಕೆವೈಸಿ ಮಾಡಲು...

ರೈತರೇ‌ ನಿಮ್ಮ ಖಾತೆಗೆ ಸೇರಲಿದೆ 10 ಸಾವಿರ ರೂ | ಪಿಎಂ ಕಿಸಾನ್ ಇ-ಕೆವೈಸಿ ಮಾಡಲು ಜಿಲ್ಲಾಧಿಕಾರಿ ಮನವಿ

Hindu neighbor gifts plot of land

Hindu neighbour gifts land to Muslim journalist

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ ಒಟ್ಟು 3 ಸಮಾನ ಕಂತುಗಳಲ್ಲಿ ಹಾಕಲು ನಿರ್ಧರಿಸಿದೆ ಹಾಗೂ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ. ಗಳ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಸುಮಾರು 50,458 ರೈತರು ನೋಂದಣಿಯಾಗಿದ್ದು, 46,744 ರೈತರ ಆಧಾರ್ ಪ್ರಮಾಣೀಕೃತಗೊಂಡಿದೆ. ಇಲ್ಲಿಯವರೆಗೆ 20,995 ಫಲಾನುಭವಿಗಳ ಇ-ಕೆವೈಸಿ ಆಗಿದ್ದು, 25,749 ಫಲಾನುಭವಿಗಳ ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇದ್ದು, ಆದಷ್ಟು ಶೀಘ್ರ ಇಕೆವೈಸಿ ಮಾಡುವಂತೆ ಕೋರಿದರು.

ಮುಂದಿನ ದಿನಗಳಲ್ಲಿ ಆರ್ಥಿಕ ನೆರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಬೇಕಾದರೆ – KYC ಮಾಡಿಸುವುದು ಅವಶ್ಯಕವಾಗಿದೆ. ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು e-KYC ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ರೈತರು ಇ-ಕೆವೈಸಿ ಯನ್ನು ಹೇಗೆ ಮಾಡಬಹುದು. ಪೂರ್ಣ ವಿವರ ಇಲ್ಲಿದೆ.

ಕೇಂದ್ರ ಸರಕಾರದ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹಲವಾರು ರೈತರು ನೋಂದಾಯಿಸಿಕೊಂಡಿದ್ದು, ನೋಂದಾಯಿಸದೇ ಇರುವ ಅರ್ಹ ರೈತರು ಸ್ವಯಂಘೋಷಣಾ ಪತ್ರ, ಎಲ್ಲ ಸರ್ವೆ ನಂಬರ್‌ಗಳ ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿ, ಬ್ಯಾಂಕ್‌ ಪಾಸ್‌ಬುಕ್‌ ಜೆರಾಕ್ಸ್‌ ಪ್ರತಿಗಳನ್ನು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಲು ಕೋರಲಾಗಿದೆ.

ಕೇಂದ್ರ ಸರಕಾರದ ಪಿಎಂ ಕಿಸಾನ್‌ ಯೋಜನೆಯಡಿ ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.

ರೈತ ಫಲಾನುಭವಿಗಳು ಇ-ಕೆವೈಸಿ ಪ್ರಕ್ರಿಯೆಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ. ಇ-ಕೆವೈಸಿ ಅವಕಾಶದಡಿ ಈಗಾಗಲೇ ಪಿಎಂ ಕಿಸಾನ್‌ ಯೋಜನೆಯಡಿ ಫಲಾನುಭವಿ ಆಗಿರುವ ಪ್ರತಿಯೊಬ್ಬ ರೈತನ ಆಧಾರ್‌ ಸಂಖ್ಯೆಯನ್ನು ನಂತರ ಆಧಾರ್‌ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್‌ ಸಂಖ್ಯೆಯನ್ನು ದಾಖಲಿಸುವ ಮೂಲಕ ಇ-ಕೆವೈಸಿ ಮಾಡಿಸಬಹುದು. ಯಾವ ಫಲಾನುಭವಿಯ ಮೊಬೈಲ್‌ ಸಂಖ್ಯೆ ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್‌ ಸಂಖ್ಯೆಗೆ ಒಟಿಪಿಯು ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ, ಅಲ್ಲಿ ಬಯೋಮೆಟ್ರಿಕ್‌ ಆಧರಿತವಾಗಿ ಇ-ಕೆವೈಸಿ ಮಾಡಬಹುದು.

ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರಕಾರವು ಮುಂದಿನ ಚಾತುರ್ಮಾಸಿಕದಲ್ಲಿ ಏ.22ರಿಂದ ಜು.22ರವರೆಗೆ ನೀಡುವ ಆರ್ಥಿಕ ನೆರವನ್ನು ಪಡೆಯಲು ಮೇ 22ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಎಂ ಕಿಸಾನ್‌ ನೋಂದಣಿ ಹೇಗೆ?
ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್‌ ತೆರೆಯಿರಿ.
ಫಾರ್ಮರ್‌ ಕಾರ್ನರ್‌’ ತೆರೆಯಿರಿ.
ನಂತರ ನ್ಯೂ ಫಾರ್ಮರ್‌ ರಿಜಿಸ್ಪ್ರೇಶನ್‌ ಕ್ಲಿಕ್ಕಿಸಿ
ಆಧಾರ್‌ ಸಂಖ್ಯೆಯನ್ನು ನಮೂದಿಸಿ
ಕ್ಯಾಪ್ಚ ಕೋಡ್‌ ನಮೂದಿಸಿ
ಮುಂದಿನ ಪುಟದಲ್ಲಿ ವಿವರಗಳನ್ನು ಭರ್ತಿಗೊಳಿಸಿ
ಬ್ಯಾಂಕ್‌ ಖಾತೆಯ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.
ನಂತರ ಸಬ್‌ಮಿಟ್‌ ಮಾಡಿ.

ಅಗತ್ಯ ದಾಖಲಾತಿಗಳು
ಆಧಾರ್ ಕಾರ್ಡ್ – ಅರ್ಜಿ ಸಲ್ಲಿಸುವ ರೈತರಿಗೆ ಆಧಾರ್ ಕಾರ್ಡ್ ಇರುವುದು ಅವಶ್ಯಕ.
ಆದಾಯ ದಾಖಲಾತಿ ಹಾಗೂ ಕೃಷಿ ಭೂಮಿ ವಿವರಗಳನ್ನು ನೀಡಬೇಕು.
ಉಳಿತಾಯ ಖಾತೆ ಅಥವಾ ಜನ್‌ – ಧನ್ ಖಾತೆ ಹೊಂದಿರುವ ಬ್ಯಾಂಕ್ ಪಾಸ್‌ಬುಕ್ ಹೊಂದಿರಬೇಕು.
ರೈತರು ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬೇಕು.
ರೇಷನ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್‌ ಅಳತೆಯ ಪೋಟೋಗಳು.

ಯಾರೆಲ್ಲ ಫಲಾನುಭವಿ ಆಗಬಹುದು?
ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದು. ಎರಡು ಹೆಕ್ಟೇರ್‌ವರೆಗಿನ ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು

ಒಂದು ವೇಳೆ ನಿಮ್ಮ ಖಾತೆಗೆ ಕೃಷಿ ಸಮ್ಮಾನ್‌ ನಿಧಿ ಹಣ ವರ್ಗಾವಣೆ ಆಗಿರದಿದ್ದರೆ, ಸರಕಾರಕ್ಕೆ ನೀವು ನೀಡಿರುವ ಮಾಹಿತಿಯಲ್ಲಿ ಏನಾದರೂ ಲೋಪವಿರಬಹುದು. ಅಥವಾ ನಿಮ್ಮ ಖಾತೆಯಲ್ಲಿ ಸಮಸ್ಯೆ ಇರಬಹುದು ಎಂಬುದನ್ನು ಮೊದಲು ಪರಿಶೀಲಿಸಿ. ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಬರುವುದರೊಳಗೆ ಈ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ನೀವು ಈ ಯೋಜನೆಯ ಲಾಭ ಪಡೆಯಬಹುದು.

ಈ ತಪ್ಪುಗಳಾಗಿವೆಯೇ ಪರಿಶೀಲಿಸಿ:
ಕಿಸಾನ್‌ ಸಮ್ಮಾನ್‌ ನಿಧಿಗೆ ನೋಂದಣಿಯಾಗುವಾಗ ನೋಂದಣಿಯಾಗುವಾಗ ನೀವು ಸಲ್ಲಿಸಿರುವ ದಾಖಲೆಗಳಲ್ಲಿ ಯಾವುದೇ ಒಂದು ದಾಖಲೆಯ ಕೊರತೆಯಿದ್ದರೆ ಸಮಸ್ಯೆಯಾಗಿರುತ್ತದೆ. ಆಧಾರ್ ಸಂಖ್ಯೆ, ಖಾತೆ ಸಂಖ್ಯೆ ಅಥವಾ ಬ್ಯಾಂಕ್ ವಿವರಗಳಲ್ಲಿನ ವ್ಯತ್ಯಾಸದಿಂದಾಗಿಯೂ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಇಂತಹ ತಪ್ಪುಗಳಾಗಿದ್ದರೆ, ಕೂಡಲೇ ಸರಿಪಡಿಸಬೇಕು. ನಂತರವಷ್ಟೇ ನೀವು ಮುಂದಿನ ಕಂತನ್ನು ಪಡೆಯಬಹುದು.

ನೀವಿ ನೀಡಿರುವ ವಿವರಗಳನ್ನು ನವೀಕರಿಸಿ :ಪಿಎಂ-ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ (https://pmkisan.gov.in/). ಇಲ್ಲಿ ಫಾರ್ಮರ್ ಕಾರ್ನರ್‌ಗೆ ಹೋಗಿ ಮತ್ತು ಎಡಿಟ್ ಟ್ಯಾಬ್‌ ಅನ್ನು ಕ್ಲಿಕ್‌ ಮಾಡಿ. ಆಧಾರ್ ವಿವರಗಳ ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮ ಆಧಾರ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ. ಕ್ಯಾಪ್ಚಾ ಕೋಡ್ ಕ್ರಿಯೇಟ್‌ ಆಗುತ್ತದೆ. ನಿಗದಿತ ಸ್ಥಳದಲ್ಲಿ ಅದನ್ನು ನಮೂದಿಸಿದ ನಂತರ ಸಲ್ಲಿಸಿ.

ಆನ್‌ಲೈನ್‌ನಲ್ಲಿ ಹೆಸರು ಸರಿಪಡಿಸಿ:
ನಿಮ್ಮ ಹೆಸರು ತಪ್ಪಾಗಿರುವುದರಿಂದಲೂ ಹಣ ಜಮೆಯಾಗಿಲ್ಲದಿರುವ ಸಾಧ್ಯತೆಗಳಿವೆ. ಅಂದರೆ, ವೆಬ್‌ಸೈಟ್‌ನಲ್ಲಿ ನೀವು ನೀಡಿರುವ ಹೆಸರು ಮತ್ತು ಆಧಾರ್‌ನಲ್ಲಿ ನಿಮ್ಮ ಹೆಸರು ವಿಭಿನ್ನವಾಗಿದ್ದರೆ, ಈ ಸಮಸ್ಯೆಯಾಗುತ್ತದೆ. ನಂತರ ನೀವು ಅದನ್ನು ಆನ್‌ಲೈನ್‌ನಲ್ಲಿ ಸರಿಪಡಿಸಬಹುದು. ಏನಾದರೂ ತಪ್ಪು ಇದ್ದರೆ, ಅದನ್ನು ನಿಮ್ಮ ಕೃಷಿ ಇಲಾಖೆ ಕಚೇರಿಯಲ್ಲಿ ಸಂಪರ್ಕಿಸಿ ಸರಿಪಡಿಸಿಕೊಳ್ಳಬಹುದು.

RELATED ARTICLES

Most Popular

Recent Comments