

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಪುತ್ತೂರಿನ ಲಕ್ಷ್ಮೀದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಹಾಲಕ್ಷ್ಮೀ ದೇವಿ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು.
ನಂತರ ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು. ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರು ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರು.