Home latest ಶೋಕಿಗಾಗಿ ಬೈಕ್ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೊಲೀಸ್ ಬಲೆಗೆ

ಶೋಕಿಗಾಗಿ ಬೈಕ್ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೊಲೀಸ್ ಬಲೆಗೆ

Hindu neighbor gifts plot of land

Hindu neighbour gifts land to Muslim journalist

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಶೋಕಿ ಮಾಡುವುದಕ್ಕೆ ಅಂತ ದುಬಾರಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ನಡೆದಿದೆ.

ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ ಆಂಧ್ರಪ್ರದೇಶದ ಮೂಲದ ಸತೀಶ್.

ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದರು. ಆದರೆ, ಪವನ್​ ಅರ್ಧಕ್ಕೆ ಕಾಲೇಜು ನಿಲ್ಲಿಸಿದ್ದ. ಇತ್ತ ಸತೀಶ್​ ಮಾತ್ರ ಬಿ.ಟೆಕ್ ಮುಂದುವರಿಸಿದ್ದ. ಇವರಿಬ್ಬರ ಗೆಳೆತನ ಶೋಕಿಗಾಗಿ ಅಡ್ಡದಾರಿಯನ್ನ ಹಿಡಿಯುವಂತೆ ಮಾಡಿದೆ. ಹೌದು. ಇಬ್ಬರು ಸೇರಿ ಬೈಕ್​ಗಳನ್ನು ಕದಿಯೋ ಕೆಲಸಕ್ಕೆ ಇಳಿದಿದ್ದಾರೆ.

ಹೀಗೆ, ಕದ್ದ ಬೈಕ್​ ಒಂದನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗುವಾಗ ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇಬ್ಬರು ಸೇರಿ ಕಳ್ಳತನ ಮಾಡಿದ್ದ 12 ರಾಯಲ್ ಎನ್​​ಫೀಲ್ಡ್ ಬೈಕ್, 2 ಡ್ಯೂಕ್, ಒಂದು ಪಲ್ಸಾರ್ ಎನ್ ಎಸ್, ಒಂದು ಡ್ಯೂಕ್ ಬೈಕ್​​ಗಳನ್ನು ಬಾಗೇಪಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೈಕ್​​ಗಳನ್ನು ಕಳವು ಮಾಡಿದ್ದ ಈ ಇಬ್ಬರು ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಅದರಿಂದ ಬರುತ್ತಿದ್ದ ಹಣದಿಂದ ಶೋಕಿ ಮಾಡುತ್ತಿದ್ದರು. ಇದೀಗ ಪೋಲಿಸರ ಬಲೆಗೆ ಬಿದ್ದಿದ್ದು, ಕಂಬಿ ಎನಿಸುವಂತೆ ಆಗಿದೆ.