Home » ಪುತ್ತೂರು: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ,ಯುವಕ ಪೊಲೀಸ್ ವಶಕ್ಕೆ

ಪುತ್ತೂರು: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ,ಯುವಕ ಪೊಲೀಸ್ ವಶಕ್ಕೆ

by Praveen Chennavara
0 comments

Hindu neighbor gifts plot of land

Hindu neighbour gifts land to Muslim journalist

ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಯುವಕ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ.

ಬಸ್ ನಿಲ್ದಾಣದಲ್ಲಿ ಕಣ್ಣೀರಿಡುತ್ತಾ ಕೂತಿದ್ದಾಗ ವಿದ್ಯಾರ್ಥಿಗಳು ಆಕೆಯಲ್ಲಿ ಈ ಬಗ್ಗೆ ವಿಚಾರಿಸಿದ್ದು ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾಳೆ.

ಈ ಯುವಕನ ಪೋಟೋವನ್ನು ತನ್ನ ಇನ್ನಾಂ ಗ್ರಾಮ್ ನಿಂದ ತೆಗೆದು ಕಿರುಕುಳ ನೀಡಿದ ವ್ಯಕ್ತಿಯನ್ನು ಸಹಪಾಠಿಗಳಿಗೆ ತೋರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆ ಪೋಟೋದ ಆಧಾರದಲ್ಲಿ ವಿದ್ಯಾರ್ಥಿಗಳು ಕಿರುಕುಳ ನೀಡಿದ್ದಾನೆ ಎಂದು ಹೇಳಲಾದ ಯುವಕನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಆ ಯುವಕನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಯುವಕ ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯಾಗಿದ್ದು,ಆತ ಯುನಿಫಾರ್ಮ್ ಧರಿಸಿರಲಿಲ್ಲವೆಂದು ಹೇಳಲಾಗಿದೆ.ಯುವಕ ಮತ್ತು ಯುವತಿ ಅಪ್ರಾಪ್ತರು ಎಂದು ತಿಳಿದುಬಂದಿದೆ.

banner

You may also like

Leave a Comment