Homelatestರಾಹುಲ್ ಗಾಂಧಿ ಭಾರತ್ ಜೋಡೋ ಕಾರ್ನರ್ ಮೀಟಿಂಗ್‌ಗೆ ರಮ್ಯಾಗೆ ಸಿಗದ ಪ್ರವೇಶ : ಕೋಪಗೊಂಡು ವಾಪಸ್

ರಾಹುಲ್ ಗಾಂಧಿ ಭಾರತ್ ಜೋಡೋ ಕಾರ್ನರ್ ಮೀಟಿಂಗ್‌ಗೆ ರಮ್ಯಾಗೆ ಸಿಗದ ಪ್ರವೇಶ : ಕೋಪಗೊಂಡು ವಾಪಸ್

Hindu neighbor gifts plot of land

Hindu neighbour gifts land to Muslim journalist

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಂದರ್ಭ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾಗೆ ಮುಜುಗರ ಆಗಿದೆ.

ಕಾರಣ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ವೇಳೆ ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ. ಇದರಿಂದ ತೀವ್ರ ಬೇಸರಗೊಂಡು ಆಕೆ ವಾಪಸಾಗಿದ್ದಾರೆ..
ರಾಯಚೂರಿನ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆಯ ಸುಮಾರಿಗೆ ನಡೆದಿದ್ದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ಸಂಜೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯ, ಬಳಿಕ ರಾಹುಲ್ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.

ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಯಿತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.

ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯ, ಕೆಲಹೊತ್ತು ಅಲ್ಲೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments