Home » ಮಾ.15 ರಿಂದ ರಾಜ್ಯದ ವಿವಿಧ ಕಡೆ ಮಳೆ ಸಂಭವ: ಹವಾಮಾನ ಇಲಾಖೆ

ಮಾ.15 ರಿಂದ ರಾಜ್ಯದ ವಿವಿಧ ಕಡೆ ಮಳೆ ಸಂಭವ: ಹವಾಮಾನ ಇಲಾಖೆ

0 comments
karnataka Rains

ಬಿಸಿಲ ಬೇಗೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಇದೀಗ ಹವಮಾನ ಇಲಾಖೆ ವಿವಿಧ ಕಡೆ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾ.15 ರಿಂದ ಮಾ.17 ರವರೆಗೆ ವಿವಿಧೆಡೆ ಮಳೆ ಸಂಭವ ಸೂಚನೆ ನೀಡಿದೆ.

ಮಾ.15 ರಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಸಂಭವ ಸಾಧ್ಯತೆಯಿದೆ.

ಮಾ. 16 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ ಮತ್ತು ಕೊಪ್ಪಳ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ) ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮಾ.17 ರಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ ಎರಡು ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಇರಲಿದೆ.

banner

You may also like