Home » ರಾಮ ಮಂದಿರ ಹಗರಣ – ಹಣ ಕದ್ದಿರುವುದನ್ನು ಒಪ್ಪಿಕೊಂಡ ಮೂವರು ಆರೋಪಿಗಳು

ರಾಮ ಮಂದಿರ ಹಗರಣ – ಹಣ ಕದ್ದಿರುವುದನ್ನು ಒಪ್ಪಿಕೊಂಡ ಮೂವರು ಆರೋಪಿಗಳು

0 comments

ಅಯೋಧ್ಯೆಯ ರಾಮಮಂದಿರ ದೇಣಿಗೆ ಹಗರಣದ ಆರೋಪಿಗಳಾದ  ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಅವರು ಪೊಲೀಸ್ ವಿಚಾರಣೆ ವೇಳೆ ಹಣ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣದಲ್ಲಿ ಒಟ್ಟು 8 ಜನರನ್ನು ಬಂಧಿಸಲಾಗಿತ್ತು. ಹಣವನ್ನು ಬಚ್ಚಿಟ್ಟಿರುವುದನ್ನು ಮತ್ತು ಅಕ್ರಮ ಎಸಗಿರುವುದನ್ನು ಒಪ್ಪಿಕೊಂಡಿರುವ ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಅವರನ್ನು ಹೆಚ್ಚಿನ ತನಿಖೆಗಾಗಿ ಉತ್ತರ ಪ್ರದೇಶ ಪೊಲೀಸರು ಮತ್ತು ಎಸ್‌ಐಟಿ ತಂಡವು ಕಸ್ಟಡಿಗೆ ಪಡೆದಿತ್ತು. ಈ  ವಿಚಾರಣೆ ವೇಳೆ ಆರೋಪಿಗಳು ತಾವು ಹಣ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. 

You may also like