Home latest Ration Card : ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೆ, ಪಡಿತರ...

Ration Card : ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೆ, ಪಡಿತರ ಸೇರಿ ಯಾವ ಸೌಲಭ್ಯವೂ ಇಲ್ಲ

Hindu neighbor gifts plot of land

Hindu neighbour gifts land to Muslim journalist

ರೇಷನ್ ಕಾರ್ಡ್ ( Ration card) ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ಇರುವ ಕಡ್ಡಾಯ ದಾಖಲೆಯಾಗಿದೆ. ಅಷ್ಟು ಮಾತ್ರವಲ್ಲದೇ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಿಸುತ್ತದೆ.

ಆದರೆ ಈಗ ಬಂದ ಮಾಹಿತಿ ಪ್ರಕಾರ, ಆಹಾರಧಾನ್ಯ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಾಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯ ಸುಮಾರು 5 ವರ್ಷಗಳಿಂದ ಸ್ಥಗಿತವಾಗಿ, ನಾಲ್ಕು ಲಕ್ಷಕ್ಕೂ ಅರ್ಜಿದಾರರು ತೊಂದರೆ ಅನುಭವಿಸುವಂತಹಾಗಿದೆ ಎಂದು ಹೇಳಲಾಗಿದೆ.

2019 ಮತ್ತು 2021ರಲ್ಲಿ ಕೋವಿಡ್ ಕಾರಣದಿಂದ ಪಡಿತರ ಚೀಟಿ ವಿತರಣೆ ಸ್ಥಗಿತಗೊಳಿಸಲಾಗಿದೆ. ಕೊರೋನಾ ಸೋಂಕಿತರಿಗೆ ಚಿಕಿತ್ಸೆ, ಕೊರೋನಾದಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಪರಿಹಾರ ನೀಡುವ ಉದ್ದೇಶದಿಂದ 2021ರ ಅಕ್ಟೋಬರ್ ನಲ್ಲಿ ಪಡಿತರ ಚೀಟಿ ನೀಡಲು ಆಹಾರ ನಿರೀಕ್ಷಕರಿಗೆ ಅಧಿಕಾರ ನೀಡಲಾಗಿತ್ತು. ಇನ್ನೂ 2.76 ಲಕ್ಷ ಬಿಪಿಎಲ್ (BPL) ಮತ್ತು 1.55 ಲಕ್ಷ ಎಪಿಎಲ್ ( APL) ಅರ್ಜಿಗಳು ಬಾಕಿ ಇವೆ.

ಬಡಜನರಿಗೆ ಬಹುಮುಖ್ಯವಾದ ಪಡಿತರ ಚೀಟಿ ಇಲ್ಲದ ಕಾರಣ ಪಡಿತರ ಸಿಗುತ್ತಿಲ್ಲ. ಅಷ್ಟು ಮಾತ್ರವಲ್ಲ, ಗಂಗಾ ಕಲ್ಯಾಣ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ, ಉದ್ಯೋಗ, ಶಿಕ್ಷಣ, ಆಯುಷ್ಮಾನ್ ಯೋಜನೆ, ತಾಯಿ ಕಾರ್ಡ್, ಹೆರಿಗೆ ಭತ್ಯೆ ಮೊದಲಾದವುಗಳಿಗೂ ಪಡಿತರ ಚೀಟಿ ಅಗತ್ಯವಾಗಿದ್ದು, ಪಡಿತರ ಚೀಟಿ ಇಲ್ಲದೆ ಈ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ ಎಂದು ಹೇಳಲಾಗಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 2017 ರಿಂದ ಪಡಿತರ ಚೀಟಿ ವಿತರಣೆ ಸ್ಥಗಿತಗೊಳಿಸಿದ್ದು ಹೆಸರು ಸೇರ್ಪಡೆ ಸೇರಿದಂತೆ ಅನೇಕ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಿದರೂ ಪ್ರತಿಕ್ರಿಯೆ ಸಿಗುತ್ತಿಲ್ಲವೆನ್ನಲಾಗಿದೆ.