HomeNewsರೆಂಜಿಲಾಡಿ: ನಿಲ್ಲದ ಕಾಡಾನೆ ಹಾವಳಿ; ಅಪಾರ ಕೃಷಿ ಹಾನಿ

ರೆಂಜಿಲಾಡಿ: ನಿಲ್ಲದ ಕಾಡಾನೆ ಹಾವಳಿ; ಅಪಾರ ಕೃಷಿ ಹಾನಿ

Hindu neighbor gifts plot of land

Hindu neighbour gifts land to Muslim journalist

ಕಡಬ: ಕೃಷಿ ತೋಟಕ್ಕೆ ನಿರಂತರ ಕಾಡಾನೆ ಲಗ್ಗೆ ಇಡುತ್ತಿರುವ ಪರಿಣಾಮ ಕೃಷಿಕರು ಅಪಾರ ನಷ್ಟ ಅನುಭವಿಸುತ್ತಿರ ಸ್ಥಿತಿ ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಪಂಜ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸುತ್ತಿದೆ.
ಕಳೆದ ಹಲವು ದಿನಗಳಿಂದ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೈಯುತ್ತಿದೆ.

ಎಳುವಾಳೆ ರಾಮಚಂದ್ರ ಗೌಡ ಅವರ ತೋಟಕ್ಕೆ ಕಳೆದ ಹಲವು ದಿನಗಳಿಂದ ಕಾಡಾನೆ ಲಗ್ಗೆ ಇಟ್ಟು 100 ಅಧಿಕ ಬಾಳೆ, 50ಕ್ಕೂ ಅಧಿಕ ಅಡಿಕೆ, ತೆಂಗು, ನೀರಿನ ಪೈಪ್ ಗಳಿಗೆ ಹಾನಿ ಮಾಡಿದೆ. ಕೃಷಿ ಗಿಡಗಳನ್ನು ಪುಡಿಗೈಯುತ್ತಿದೆ. ಘಟನೆಯಲ್ಲಿ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಘಟನೆಯ ಬಗ್ಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಗ್ರಾ.ಪಂ. ಸದಸ್ಯ ಉಮೇಶ್ ಎಸ್.ಜೆ., ಅರಣ್ಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭಾಗದ ನಿಡ್ಡೋ, ಬಳಕ್ಕ, ಇಚಿಲಡ್ಕ, ಎಳುವಾಳೆ, ಹೇರ, ಕೊಣಾಜೆ ಭಾಗದಲ್ಲಿ ಕಾಡಾನೆ ನಿರಂತರವಾಗಿ ಸಂಚರಿಸುತ್ತಾ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ತೊಂದರೆ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಅರಣ್ಯ ಇಲಾಖೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments