Home » Revenue Dept: ರೈತರ ಜಮೀನಿಗೆ ರಸ್ತೆ ಕಲ್ಪಿಸಲು ತಹಶೀಲ್ದಾರ್ ಗಳಿಗೆ ವಿಶೇಷ ಅಧಿಕಾರ!!

Revenue Dept: ರೈತರ ಜಮೀನಿಗೆ ರಸ್ತೆ ಕಲ್ಪಿಸಲು ತಹಶೀಲ್ದಾರ್ ಗಳಿಗೆ ವಿಶೇಷ ಅಧಿಕಾರ!!

0 comments

Revenue Dept: ರೈತರು ತಮ್ಮ ಹೋಲಾಗುತ್ತೆ ಅಥವಾ ಜಮೀನುಗಳಿಗೆ ಹೋಗಲು ಇನ್ನೊಬ್ಬರ ಜಮೀನನ್ನು ಬಳಸುತ್ತಿದ್ದರೆ ನಕ್ಷೆಯಲ್ಲಿ ತಮ್ಮ ಜಮೀನಿಗೆ ರಸ್ತೆ ವ್ಯವಸ್ಥೆ ಇದ್ದರೆ, ಅದನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತಹ ದಾರಿಯನ್ನು ತಕ್ಷಣವೇ ತೆರವುಗೊಳಿಸುವುದು ಕಂದಾಯ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸಚಿವರು ಮಾಹಿತಿ ನೀಡಿದ್ದು,ಖಾಸಗಿ ಜಮೀನುಗಳ ಮೂಲಕ ಹಾದು ಹೋಗುವ ವಾಡಿಕೆ ರಸ್ತೆಗಳ ಪ್ರಕರಣಗಳು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತವೆ. ಆದಾಗ್ಯೂ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಬಿತ್ತನೆ ಬೀಜ, ಗೊಬ್ಬರ ಸಾಗಿಸಲು ಮತ್ತು ಬೆಳೆಗಳನ್ನು ಸಾಗಿಸಲು ದಾರಿ ಕಲ್ಪಿಸಿಕೊಡಲು ತಹಶೀಲ್ದಾರ್‌ಗಳಿಗೆ ವಿಶೇಷ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಜಮೀನಿನ ಮೂಲ ದಾಖಲೆಗಳು ನಾಶ ಹಾಗೂ ದುರಪಯೋಗವಾಗುವುದನ್ನು ತಡೆಯಲು ‘ಭೂ ಸುರಕ್ಷಾ’ ಯೋಜನೆಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ 63.58 ಕೋಟಿ ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ರೈತರು ಆನ್‌ಲೈನ್ ಮೂಲಕವೇ ಹಳೆಯ ಕಂದಾಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಅನಗತ್ಯವಾಗಿ ತಾಲ್ಲೂಕು ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

You may also like