Home » ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1.0 ಲಕ್ಷ ಅನುದಾನ ಮಂಜೂರು

ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1.0 ಲಕ್ಷ ಅನುದಾನ ಮಂಜೂರು

0 comments

ಬಳೆoಜ ವಲಯದ ಕರಂಬಾರು ಗ್ರಾಮದ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೂಟ್ಟೆಲ್ಮಾರ್ ಇದರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1.0 ಲಕ್ಷ ಅನುದಾನ ಮಂಜೂರು ಮಾಡಿರುತ್ತಾರೆ.

ತಾಲೂಕಿನ ಮಾನ್ಯ ಯೋಜನಾಧಿಕಾರಿಯವರು ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಹೆಗ್ಗಡೆಯವರಿಗೆ ಡಿ.ಡಿ ವಿತರಣೆ ಮಾಡಿ ಶುಭ ಹಾರೈಸಿದರು. ವಿತರಣೆ ಸಂಧರ್ಭ ದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್ ಹೆಗ್ಡೆ, ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷರಾದ ನವೀನ್ ಸಾಮಾನಿ, ವಲಯದ ಮೇಲ್ವಿಚಾರಕಿ, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರಾದ ಸದಾಶಿವ ಉಪಸ್ಥಿತರಿದ್ದರು.

 

You may also like