Home News ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರಿಗೆ ಸನ್ಮಾನ

ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರಿಗೆ ಸನ್ಮಾನ

Hindu neighbor gifts plot of land

Hindu neighbour gifts land to Muslim journalist

ಸವಣೂರು : ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರು ಸತತ 30 ವರ್ಷಗಳಿಂದ ಶ್ರೀರಾಮಕೃಷ್ಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ.ಲಿ. ಮಂಗಳೂರು ಇದರ ನಿರ್ದೇಶಕರಾಗಿದ್ದು ಈ ಬಾರಿಯ ಚುನಾವಣೆಯಲ್ಲೂ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.

ಇವರನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸಂಸ್ಥೆಯ ಆಡಳಿತಾಧಿಕಾರಿ ನ್ಯಾಯವಾದಿ ಅಶ್ವಿನ್.ಎಲ್ ಶೆಟ್ಟಿ , ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ, ಉಪಪ್ರಾಂಶುಪಾಲ ಶೇಷಗಿರಿ ಎಂ. ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಸನ್ಮಾನಿಸಿದರು.