Home » Shivamogga : ಸಂಕೇತ್ ಹತ್ಯೆ ಪ್ರಕರಣ – ಬೇಧ, ಭಾವ ಮರೆತು ಗಾಂಜಾ, ಅಕ್ರಮ ಮದ್ಯದ ವಿರುದ್ಧ ಬೀದಿಗಿಳಿದ ಹಿಂದೂ-ಮುಸ್ಲಿಂ !!

Shivamogga : ಸಂಕೇತ್ ಹತ್ಯೆ ಪ್ರಕರಣ – ಬೇಧ, ಭಾವ ಮರೆತು ಗಾಂಜಾ, ಅಕ್ರಮ ಮದ್ಯದ ವಿರುದ್ಧ ಬೀದಿಗಿಳಿದ ಹಿಂದೂ-ಮುಸ್ಲಿಂ !!

0 comments

Shivamogga : ಶಿವಮೊಗ್ಗ ಜಿಲ್ಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಬೆನ್ನಲ್ಲೇ ಸ್ಥಳೀಯರು ಎಚ್ಚೆತ್ತುಕೊಂಡಿದ್ದು ಬೇಧ, ಭಾವವನ್ನು ಮರೆತು ಹಿಂದೂ- ಮುಸ್ಲಿಮರು ಒಟ್ಟಾಗಿ ಗಾಂಜಾ ಮತ್ತು ಅಕ್ರಮ ಮದ್ಯದ ವಿರುದ್ಧ ಬೀದಿಗೆ ಇಳಿದು ಹೋರಾಟ ನಡೆಸಿದ್ದಾರೆ. 

ಶಿವಮೊಗ್ಗದ ಸೂಳೆಬೈಲಿನಲ್ಲಿ ನಡೆದ ಬಾಲಕ ಸಂಕೇತ್‌ನ ಭೀಕರ ಹತ್ಯೆ ಪ್ರಕರಣ ಈಗ ಇಡೀ ಬಡಾವಣೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಕೃತ್ಯಕ್ಕೆ ಬಡಾವಣೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಮಾರಾಟ ಮತ್ತು ಅಕ್ರಮ ಸಣ್ಣ ಸಣ್ಣ ಮದ್ಯದ ಅಂಗಡಿಗಳೇ ಮೂಲ ಕಾರಣ ಎಂದು ಸ್ಥಳೀಯರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಯಾವುದೇ ಭೇದವಿಲ್ಲದೆ ಒಗ್ಗಟ್ಟಾಗಿ ಬೀದಿಗೆ ಇಳಿದಿದ್ದಾರೆ.

ಅಕ್ರಮವಾಗಿ ಸಿಗುತ್ತಿರುವ ಗಾಂಜಾ ಮತ್ತು ಮದ್ಯದಿಂದಾಗಿ ಸೂಳೆಬೈಲು ಭಾಗದ ಯುವಕರು ಮತ್ತು ಶಾಲಾ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಇದು ಯುವಕರನ್ನು ವಿಕೃತವಾಗಿ ವರ್ತಿಸುವಂತೆ ಮಾಡುತ್ತಿದ್ದು, ಇಂತಹ ಚಟುವಟಿಕೆಗಳಿಗೆ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಕೇವಲ ಹಿರಿಯರಷ್ಟೇ ಅಲ್ಲದೆ, ಸಣ್ಣ ಮಕ್ಕಳು ಸಹ ಪಾಲ್ಗೊಂಡು ಮುಂಬತ್ತಿ ಹಿಡಿದು ಮೆರವಣಿಗೆ ನಡೆಸಿದ್ದು ವಿಶೇಷವಾಗಿತ್ತು. ಯಾವುದೇ ಸಮುದಾಯದವರಾಗಲಿ, ಕಾನೂನು ಬಾಹಿರ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬುದು ಇಡೀ ಸೂಳೆಬೈಲಿನ ಜನರ ಒಕ್ಕೊರಲ ದನಿಯಾಗಿದೆ. 

banner

You may also like