Home latest ತೆಲುಗು ಮೇರು ನಿರ್ದೇಶಕ ಶಂಕರಾಭರಣಮ್ ಖ್ಯಾತಿಯ ಕೆ. ವಿಶ್ವನಾಥ್ ಇನ್ನಿಲ್ಲ!

ತೆಲುಗು ಮೇರು ನಿರ್ದೇಶಕ ಶಂಕರಾಭರಣಮ್ ಖ್ಯಾತಿಯ ಕೆ. ವಿಶ್ವನಾಥ್ ಇನ್ನಿಲ್ಲ!

Hindu neighbor gifts plot of land

Hindu neighbour gifts land to Muslim journalist

ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಪ್ರಸಿದ್ಧಿ ಹೊಂದಿದ್ದ, ಹಿರಿಯ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) (92) ಗುರುವಾರ (ಫೆ.2) ರಂದು ಸ್ವರ್ಗ ಸ್ವಾಧೀನರಾಗಿದ್ದಾರೆ.

ಕೆ.ವಿಶ್ವನಾಥರವರು ಸ್ವಾತಿ ಮುತ್ಯಮ್, ಸಪ್ತಪದಿ, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ದಾಖಲೆ ಬರೆದ ಸಿನಿಮಾಗಳನ್ನು ನಿರ್ದೇಶಿಸಿದ್ದರು. ವಿಶ್ವನಾಥ್ ಅವರು ಕಳೆದ ಕೆಲ ಸಮಯದಿಂದ ವಯೋಸಹಜ ಕಾರಣದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಗಂಭೀರಗೊಂಡ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ವಿಶ್ವನಾಥ್ ನಿರ್ದೇಶಕರಾಗಿ ಅಷ್ಟೇ ಅಲ್ಲದೇ ನಟರಾಗಿ, ಚಿತ್ರಕಥೆಗಾರರಾಗಿಯೂ ಛಾಪು ಮೂಡಿಸಿದ್ದರು. ಸ್ವರಾಭಿಷೇಕಂ, ಠಾಗೂರ್, ಅತಡು, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಶ್ವನಾಥ್ ಅವರ ‘ಶಂಕರಾಭರಣಂ’ ಸಿನಿಮಾಗೆ ರಾಷ್ಟ್ರೀಯ ಫಿಲ್ಮ್ ಅವಾರ್ಡ್ ನ್ನೂ ಪಡೆದಿದ್ದರು. ಹಾಗೂ ‘ಸಪ್ತಪದಿ’ ಸಿನಿಮಾಗೆ ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಲನಚಿತ್ರಕ್ಕಾಗಿ ನರ್ಗಿಸ್ ದತ್ ಪ್ರಶಸ್ತಿಗೂ ಭಾಜನರಾಗಿದ್ದರು.

ಸಿನಿಮಾ ಕ್ಷೇತ್ರದಲ್ಲಿ ಅನನ್ಯ ಸಾಧನೆಯನ್ನು ಪರಿಗಣಿಸಿ 2017 ರಲ್ಲಿ ಅತ್ಯುನ್ನತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೂ ಭಾಜನರಾಗಿದ್ದ ಕೆ ವಿಶ್ವನಾಥ್, ಈ ವರೆಗೆ ಒಟ್ಟು 5 ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದರು. ರಾಜ್ಯದ ನಂದಿ ಪ್ರಶಸ್ತಿಗೆ 7 ಬಾರಿ ಭಾಜನರಾಗಿದ್ದಾರೆ. 10 ಫಿಲ್ಮ್ ಫೇರ್ ಅವಾರ್ಡ್ ಗಳು, ಹಿಂದಿಯಲ್ಲಿ ಒಂದು ಫಿಲ್ಮ್ ಫೇರ್ ಅವಾರ್ಡ್ ಗಳನ್ನು ಪಡೆದಿರುವ ಕೆ.ವಿಶ್ವನಾಥ್ ಅವರನ್ನು ಭಾರತ ಸರ್ಕಾರ ಅವರ ಕಲಾ ಸೇವೆಯನ್ನು ಗುರುತಿಸಿ 1992 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿ ಗೌರವಿಸಿದೆ.