ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕುರಿ ದೊಡ್ಡಿಗೆ ಬೆಂಕಿ ಬಿದ್ದ ಪರಿಣಾಮ ಶೆಡ್ನಲ್ಲಿದ್ದ 700 ಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ.

ಕುರಿಶೆಡ್ ಮಧುಸೂಧನ್ ಎನ್ನುವವರಿ ಗೆಸೇರಿದ್ದು, ಸುಮಾರು 700 ಕ್ಕೂ ಹೆಚ್ಚು ಕುರಿಗಳನ್ನು ಸಾಕಾಣಿಕೆ ಮಾಡಿದ್ದರು.
ನಿನ್ನೆ ತಡ ರಾತ್ರಿ ಶೆಡ್ಗೆ ಬೆಂಕಿ ಬಿದ್ದಿದ್ದು, ಇಬ್ಬರು ಕೆಲಸಗಾರರು ಜೋರಾಗಿ ಕಿರುಚಿದ್ದಾರೆ. ಅವರ ಕಿರುಚಾಟ ಕೇಳಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡುವ ವೇಳೆಗೆ ಇಡೀ ಕುರಿಶೆಡ್ ಬೆಂಕಿಗಾಹುತಿಯಾಗಿದೆ. ಕುರಿಗಳೆಲ್ಲ ಬೆಂಕಿಗಾಹುತಿಯಾಗಿದೆ.
ಸಿಂಧನೂರು ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಸೂಕ್ತ ಪರಿಹಾರಕ್ಕೆ ಮಾಲೀಕ ಮಧುಸೂಧನ್ ರೆಡ್ಡಿ ಆಗ್ರಹ ಮಾಡಿದ್ದಾರ.ೆ

