Home latest ಮಸೀದಿ ಎದುರು ಬಾವುಟ ಕಟ್ಟುವಾಗ ಮಾರಾಮಾರಿ | ಎರಡು ಕೋಮುಗಳ ನಡುವೆ ಬಡಿದಾಟ, ದೂರು ಪ್ರತಿದೂರು...

ಮಸೀದಿ ಎದುರು ಬಾವುಟ ಕಟ್ಟುವಾಗ ಮಾರಾಮಾರಿ | ಎರಡು ಕೋಮುಗಳ ನಡುವೆ ಬಡಿದಾಟ, ದೂರು ಪ್ರತಿದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ಶೃಂಗೇರಿ ಪಟ್ಟಣದ ವೆಲ್‌ಕಂ ಗೇಟ್‌ ಮಸೀದಿ ಎದುರು ಬಾವುಟ ಕಟ್ಟುವ ವಿಚಾರವಾಗಿ ಮಂಗಳವಾರ ಎರಡು ಕೋಮುಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂಬಂಧ ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ನೀಡಲಾಗಿದೆ.

ಸೋಮವಾರದಿಂದ ಜಿಲ್ಲೆಯಾದ್ಯಂತ ಶ್ರೀರಾಮ ಸೇನೆ ವತಿಯಿಂದ ದತ್ತಮಾಲ ಅಭಿಯಾನ ಆರಂಭವಾಗಿದ್ದು, ಪಟ್ಟಣದಲ್ಲಿಯೂ ಶ್ರೀ ರಾಮಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ, ಬ್ಯಾನರ್‌, ಬಟಿಂಗ್ಸ್‌ ಕಟ್ಟುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಘಟನೆ ನಡೆದಿದೆ.

ವೆಲ್‌ಕಂ ಗೇಟ್‌ ಮಸೀದಿ ಮುಂಭಾಗದಲ್ಲಿ ಕೇಸರಿ ಬಾವುಟ ಮತ್ತು ಬಟಿಂಗ್ಸ್‌ಗಳನ್ನು ಕಟ್ಟಲಾಗಿದ್ದು, ಈ ವಿಚಾರವಾಗಿ ಪಟ್ಟಣ ಪಂಚಾಯಿತಿ ಸದಸ್ಯ ರಫಿಕ್‌ ಅಹಮದ್‌ ಮತ್ತು ಶ್ರೀರಾಮ ಸೇನೆ ಮುಖಂಡ ಅರ್ಜುನ್‌ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮಾತು ಹೊಡೆದಾಟಕ್ಕೆ ನಾಂದಿಯಾಗಿದೆ.

ಈ ಪ್ರಕರಣದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯಲ್ಲಿ ಎರಡು ಕೋಮುಗಳ ದೂರು, ಪ್ರತಿದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೊಪ್ಪ ಎಎಸ್‌ಪಿ ಗುಂಜನ್‌ ಆರ್ಯ ಭೇಟಿ ನೀಡಿ ಈ ಪ್ರಕರಣದ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ.