Home News Pratap Simha: ಸಿದ್ದರಾಮಯ್ಯ ಮೈಸೂರಿನ ಸುಪುತ್ರ- ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೇನಿಲ್ಲ; ಸಿಎಂ ಪರ...

Pratap Simha: ಸಿದ್ದರಾಮಯ್ಯ ಮೈಸೂರಿನ ಸುಪುತ್ರ- ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೇನಿಲ್ಲ; ಸಿಎಂ ಪರ ಬ್ಯಾಟಿಂಗ್‌ ಮಾಡಿದ ಪ್ರತಾಪ್‌ ಸಿಂಹ

Hindu neighbor gifts plot of land

Hindu neighbour gifts land to Muslim journalist

Pratap Simha: ಸಿದ್ದರಾಮಯ್ಯ ಅವರು ನಲುವತ್ತು ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಮೈಸೂರಿನ ಕೆ.ಆರ್‌.ಎಸ್‌ ರಸ್ತೆಗೆ ಪಾಲಿಕೆ ನಾಮಕರಣ ಮಾಡಲು ಮುಂದಾಗಿರುವ ವಿಚಾರಕ್ಕೆ ಭಾರೀ ಚರ್ಚೆಯಾಗಿತ್ತು. ಈ ಕುರಿತು ವಿರೋಧ ವ್ಯಕ್ತವಾದ ಬೆನ್ನಲ್ಲೇ ಪ್ರತಾಪ್‌ ಸಿಂಹ ತಮ್ಮ ಹೇಳಿಕೆಯನ್ನು ನೀಡಿದ್ದಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ, ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧ ಮಾಡುತ್ತೇವೆ. ಆದರೆ ಈ ವಿಚಾರದಲ್ಲಿ ಅಲ್ಲ. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದು, ಮೈಸೂರಿಗೆ ಸಿದ್ದರಾಮಯ್ಯ ಅವರ ಕೊಡುಗೆ ಬಹಳ ಇದೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಜಯದೇವ ಆಸ್ಪತ್ರೆಯ ಕಟ್ಟಡ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದ್ದು ಸಿದ್ದರಾಮಯ್ಯ, ರಾಜಪಥ ಮಾಡಿದ್ದು ಸಿದ್ದರಾಮಯ್ಯ. ಹೀಗಾಗಿ ಅವರ ಹೆಸರು ಇಡುವುದರಲ್ಲಿ ತಪ್ಪೇನಿಲ್ಲ. ಈ ವಿಷಯದಲ್ಲಿ ವಿರೋಧ ವ್ಯಕ್ತ ಮಾಡಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಎಂದು ಹೇಳಿದರು.