Home » ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – 20 ಟಿಎಂಸಿ ಸಂಸದರು NDA ಸೇರ್ಪಡೆ !!

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – 20 ಟಿಎಂಸಿ ಸಂಸದರು NDA ಸೇರ್ಪಡೆ !!

0 comments

 

ರಾಷ್ಟ್ರ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದ್ದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ಸಿನ(TMC) 20 ಸಂಸದರು ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿ ಲೋಕಸಭಾ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ನಂತರ ದೀದಿಯ ಟಿಎಂಸಿಯಲ್ಲಿ ಎಲ್ಲವೂ ಸರಿಯಿಲ್ಲ. ಮಮತಾ ಬ್ಯಾನರ್ಜಿ ಹೀನಾಯವಾಗಿ ಸೋಲುಂಡ ಬಳಿಕ ಒಬ್ಬೊಬ್ಬ ನಾಯಕರಾಗಿ ಟಿಎಂಸಿ ತೊರೆದು ಬಿಜೆಪಿಯತ್ತ (BJP) ಮುಖಮಾಡಿದ್ದಾರೆ. ಇದರ ನಡುವೆ, 80 ಟಿಎಂಸಿ ಶಾಸಕರ ಪೈಕಿ ಈಗಾಗಲೇ 59 ಶಾಸಕರು ಮಮತಾ ಬ್ಯಾನರ್ಜಿಯನ್ನ ಹೊರಗಿಟ್ಟು ತಮ್ಮ ವಿರೋಧ ಪಕ್ಷದ ನಾಯಕರನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿಗೆ ಮತ್ತೆ ದೊಡ್ಡ ಶಾಕ್ ಎದುರಾಗಿದ್ದು ಟಿಎಂಸಿಯ 20 ಸಂಸದರು ಪಕ್ಷಕ್ಕೆ ಗುಡ್ ಬೈ ಹೇಳಿ NDA ಮೈತ್ರಿ ಕೂಟಕ್ಕೆ ಬೆಂಬಲ ನೀಡುವುದಾಗಿ ಲೋಕಸಭೆಯ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ತಾವು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯಿಂದ ಹೊರಬಂದಿರುವುದರಿಂದ ನಮಗೆ ಸಂಸತ್ತಿನಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು ಮತ್ತು ಟಿಎಂಸಿ ಸಂಸದೀಯ ನಾಯಕರಾಗಿರುವ ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವವನ್ನು ನಾವು ಒಪ್ಪುವುದಿಲ್ಲ ಎಂದು ಈ ಬಂಡಾಯ ಸಂಸದರು ಮನವಿ ಮಾಡಿದ್ದಾರೆ. ಅಲ್ಲದೆ ಈ ಬಂಡಾಯ ಬಣದ ನಾಯಕಿಯಾಗಿ ಕಾಕೋಲಿ ಘೋಷ್ ದಸ್ತಿದಾರ್ (Kakoli Ghosh Dastidar) ಅವರನ್ನು ಗುರುತಿಸಬೇಕೆಂದು ಸ್ಪೀಕರ್ ಅವರಿಗೆ ಕೋರಲಾಗಿದೆ. ಪತ್ರಕ್ಕೆ ಸಹಿ ಹಾಕಿದವರಲ್ಲಿ ಅರೂಪ್ ಚಕ್ರವರ್ತಿ, ಪಾರ್ಥ ಭೌಮಿಕ್, ಶತಬ್ದಿ ರಾಯ್, ಜಗದೀಶ್ ವಸುನಿಯಾ, ಜೂನ್ ಮಾಲಿಯಾ ಸೇರಿದಂತೆ ಪ್ರಮುಖ ನಾಯಕರಿದ್ದಾರೆ.

banner

You may also like