

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು ನೆರವೇರಿತು. ಪೈ ಅವರ ಸಿತಾರ್ ನಾದವು ಭಕ್ತಿಭಾವವನ್ನು ಮೂಡಿಸಿತು.
ಈ ಸಂದರ್ಭದಲ್ಲಿ ಹೆಗ್ಗಡೆ ದಂಪತಿಗಳು ಕೊಚ್ಚಿಕಾರ್ ದೇವದಾಸ್ ಪೈ ಅವರ ಸಂಗೀತಸೇವೆಯನ್ನು ಶ್ಲಾಘಿಸಿ, ಸಂಗೀತಕಲಾ ಕ್ಷೇತ್ರದಲ್ಲಿ ಅವರ ಅಪಾರ ಕೊಡುಗೆಯನ್ನು ಮುಕ್ತಕಂಠದಿAದ ಪ್ರಶಂಸಿಸಿದರು. ಬಳಿಕ ಶ್ರೀ ಮಂಜುನಾಥ ದೇವರ ಮೊಹರಿರುವ ಸುವರ್ಣಪದಕವನ್ನು ಪ್ರದಾನ ಮಾಡಿ, ಶಾಲು ಹೊದಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಅನೇಕ ಭಕ್ತರು ಹಾಗೂ ಸಂಗೀತಾಸಕ್ತರು ಉಪಸ್ಥಿತರಿದ್ದು, ಮಹಾಶಿವರಾತ್ರಿಯ ಆಚರಣೆಗೆ ವಿಶೇಷ ಮೆರುಗು ನೀಡಿತು.