Home » ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

0 comments

ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ. ಇಂದಿಗೂ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲನ್ನು ಹತ್ತುವುದು ಇಳಿಯುವುದನ್ನು ಮಾಡುತ್ತಿದೆ. ಈಗ ಈ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶ ನೀಡಿದೆ.

ಯಸ್, ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ತನ್ನ ಸ್ಪಷ್ಟ ನಿಲುವನ್ನು ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ, ಮರು ತನಿಖೆಯ ಅಗತ್ಯತೆ ಕುರಿತು ಸರ್ಕಾರವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಸೂಚಿಸಿದೆ.

ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದ್ದು, “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ನಮಗೆ ಸ್ಪಷ್ಟ ನಿಲುವನ್ನು ನೀಡಿ” ಎಂದು ಪೀಠವು ಖಡಕ್ ಸೂಚನೆ ನೀಡಿತು.

ಅಲ್ಲದೆ ಸಂತ್ರಸ್ತೆಯ ಪರ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ. ನುಲಿ ಮತ್ತು ಶೇಖರ್ ಜಿ. ದೇವಸಾ ಅವರು “ಈ ಪ್ರಕರಣದಲ್ಲಿ ಅನೇಕ ಸಾಕ್ಷಿಗಳು ನಿಗೂಢ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ. ಹೀಗಾಗಿ ಹೀಗಿರುವ ಸಾಕ್ಷಿಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು” ಎಂದು ಕೇಳಿಕೊಂಡರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಎಎಜಿ ಅವರಿಗೆ ನಿರ್ದೇಶನ ನೀಡಿತು.

banner

You may also like