Home News ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ವಿಶೇಷ ಸೂಚನೆ!!

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ವಿಶೇಷ ಸೂಚನೆ!!

Hindu neighbor gifts plot of land

Hindu neighbour gifts land to Muslim journalist

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಹಲವಾರು ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವಂತಹ ಜನರು ಅರೆನಗ್ನ ವಸ್ತ್ರ ಧರಿಸಿ ದೇವಸ್ಥಾನಕ್ಕೆ ತೆರಳುತ್ತಾರೆ. ಈ ರೀತಿಯಾಗಿ ಹೋಗುವುದಕ್ಕೆ ಇದೀಗ ನಿಷೇಧ ಹೇರಲಾಗಿದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ, ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿನ ರಥ ಬೀದಿಯಿಂದ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸುತ್ತಿದ್ದರು. ಅದಕ್ಕೆ ಇದೀಗ ನಿಷೇಧ ವಿಧಿಸಲಾಗಿದೆ.

ಈ ನಿರ್ಧಾರವನ್ನು ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಕಮಿಟಿಯಿಂದ ಕೈಗೊಳ್ಳಲಾಗಿದೆ. ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವಸ್ಥಾನ ರಥದ ನಿಲುಗಡೆ ಸ್ಥಳದಿಂದ ದೇವಸ್ಥಾನದ ಪಶ್ಚಿಮ ದ್ವಾರದವರೆಗೆ ಭಕ್ತರು ಅರೆಬರೆ ಬಟ್ಟೆಗಳನ್ನು ಧರಿಸಿ, ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

ಈ ನಿಷೇಧ ಏಕೆಂದರೆ, ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ದ್ವಾರದವರೆಗಿನ ರಸ್ತೆಯಲ್ಲಿ ಅರೆಬರೆ ಉಡುಪು ಧರಿಸಿ ಸುತ್ತಾಡುವವರ ಸಂಖ್ಯೆ ಹೆಚ್ಚಾಗಿತ್ತು. ಈ ಕಾರಣದಿಂದಾಗಿ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯು ಈ ನಿರ್ಧಾರವನ್ನು ಕೈಗೊಂಡಿದೆ.