ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.


ನಗರದ ಬೈಪಾಸ್ ಬಳಿಯ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಹಬ್ಬ– 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರೋದಾಗಿ ಹೇಳಿದ್ದಾರೆ. ಶೂದ್ರನಾದ ಶಂಭೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಾಸ ಮಾಡಿ” ಎಂದಿದ್ದಾರೆ.
ಅಲ್ಲದೆ ಬೌದ್ಧ ಧರ್ಮ ಅತ್ಯಂತ ಮಾನವೀಯವಾದ ಧರ್ಮ, ವೈಜ್ಞಾನಿಕ ಧರ್ಮವಾಗಿದೆ. ಭಾರತೀಯ ರೈತನ ಮಗನಾದ ಬುದ್ಧನ ಪ್ರೇರಣೆಯಿಂದ ಆರಂಭವಾದ ಬೌದ್ಧಧರ್ಮ ಭರತ ಖಂಡದಲ್ಲಿ 1200 ವರ್ಷಗಳ ಕಾಲ ಜೀವಂತವಾಗಿತ್ತು. ಅತ್ಯಂತ ವೈಜ್ಞಾನಿಕ ಹಾಗೂ ಮಾನವೀಯ ನೆಲೆಯನ್ನು ಹೊಂದಿದ್ದರಿಂದ ಬುದ್ಧ ಧರ್ಮವು ಚೀನಾ, ಜಪಾನ್, ಶ್ರೀಲಂಕಾ ಸೇರಿ ಹಲವು ರಾಷ್ಟ್ರಗಳಿಗೆ ವ್ಯಾಪಿಸಿ ಈಗಲೂ ಜೀವಂತವಾಗಿದೆ’ ಎಂದು ತಿಳಿಸಿದರು.
