Home » ಸುಬ್ರಹ್ಮಣ್ಯ: ಪ್ರಾಧ್ಯಾಪಕನ ಕಾಮ ಕೃತ್ಯಕ್ಕೆ ಅ.ಭಾ.ವಿ.ಪ ಖಂಡನೆ | ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಸುಬ್ರಹ್ಮಣ್ಯ: ಪ್ರಾಧ್ಯಾಪಕನ ಕಾಮ ಕೃತ್ಯಕ್ಕೆ ಅ.ಭಾ.ವಿ.ಪ ಖಂಡನೆ | ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

by ಹೊಸಕನ್ನಡ
0 comments

Hindu neighbor gifts plot of land

Hindu neighbour gifts land to Muslim journalist

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ ತಿದ್ದಿ ತೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಪೈಶಾಚಿಕ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ ಬಗ್ಗೆ ಅನೇಕ ದೂರುಗಳಿದ್ದದ್ದು ನಿಧಾನವಾಗಿ ಹೊರಬರುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು. ಕುಕ್ಕೆ ಸುಬ್ರಹ್ಮಣ್ಯನ ಪೋಷಣೆಯಲ್ಲಿರುವ ವಿದ್ಯಾಸಂಸ್ಥೆ ಗೆ ಕೆಟ್ಟ ಹೆಸರು ತಂದ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಈ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಹಾಗೂ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಅ.ಭಾ.ವಿ.ಪ ಉಗ್ರವಾಗ ಹೋರಾಟದ ಎಚ್ಚರಿಕೆ ನೀಡುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

You may also like

Leave a Comment