Home latest ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ!! | ಮಣ್ಣಿನಡಿ ಸಿಲುಕಿ ಇಬ್ಬರು...

ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ!! | ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ನಾಪತ್ತೆ

Hindu neighbor gifts plot of land

Hindu neighbour gifts land to Muslim journalist

ಕುಕ್ಕೇ ಸುಬ್ರಹ್ಮಣ್ಯ: ಸುಳ್ಯ-ಕಡಬ ಉಭಯ ತಾಲೂಕುಗಳಲ್ಲಿ ಇಂದು ಸುರಿದ ಭೀಕರ ಮಳೆಗೆ ನಾಗ ಕ್ಷೇತ್ರ ಕುಕ್ಕೇ ಸುಬ್ರಮಣ್ಯ ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ.

ವರುಣನ ಆರ್ಭಟಕ್ಕೆ ಕುಕ್ಕೆಯ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಗೌಡ ಎಂಬವರ ಮನೆ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಜರಿದಿದ್ದು, ಪರಿಣಾಮ ಮನೆಯೊಳಗಿದ್ದ ಓರ್ವ ವೃದ್ಧೆ, ಮಕ್ಕಳು ಸಹಿತ 3 ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ಸದ್ಯ ಶೋಧ ಕಾರ್ಯ ಮುಂದುವರಿದಿದ್ದು, ಸ್ಥಳಕ್ಕೆ ಪೊಲೀಸರು, ಸ್ಥಳೀಯಾಡಳಿತ ಅಧಿಕಾರಿಗಳು ಆಗಮಿಸಿದ್ದು,

ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ನಾಗರ ಪಂಚಮಿಯ ಹಿಂದಿನ ದಿನವೇ ಭಾರಿ ಅವಗಢ ಸಂಭವಿಸಿದೆ. ಮೇಘ ಸ್ಫೋಟ ಆಗಿದೆ. ಮಹಾ ಮಳೆಯ ಸಂದರ್ಭ ಹೊಳೆ ಉಕ್ಕಿ ಹರಿದಿದೆ. ಅಲ್ಲದೆ ಗುಡ್ಡದ ಮಣ್ಣು ಸಡಿಲಗೊಂಡು ಮನೆಯೊಂದರ ಮೇಲೆ ಗುಡ್ಡವೇ ಕುಸಿದಿದೆ. ಮಕ್ಕಳಿಬ್ಬರು ಮಣ್ಣಿನ ಒಳಗೆ ನಾಪತ್ತೆ ಆಗಿದ್ದಾರೆ.

ಗೌಡರ ಹಿತ್ತಲಿನ ಗುಡ್ಡ ಸಡಿಲಗೊಂಡು ಕುಸಿದು ಮನೆಯ ಮೇಲೆ ಬಿದ್ದಿತ್ತು. ಆಗ ಮನೆಯಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮಣ್ಣಿನ ಅಡಿ ಸಿಲುಕಿ ಕೊಂಡಿದ್ದಾರೆ,ಇಬ್ಬರು ಮಕ್ಕಳು ನಾಪತ್ತೆ ಯಾಗಿದ್ದಾರೆ ಎಂಬ ಮಾಹಿತಿ ಲಭ್ಯ ಆಗಿದೆ.

ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಅವರ ಮೃತದೇಹವನ್ನು ರಕ್ಷಣಾ ಕಾರ್ಯಚರಣೆ ಮೂಲಕ ಹೊರತೆಗೆಯಲಾಯಿತು.