

ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ–ವೇಣೂರು, ಬೆಳ್ತಂಗಡಿ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಕಾರ್ಯಕ್ರಮವನ್ನು ದಿನಾಂಕ 8 ಫೆಬ್ರವರಿ 2026 ರಂದು ಬೆಳಿಗ್ಗೆ, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಆನಂದ ಕೆ.ಸಿ. ಮುಖ್ಯಶಿಕ್ಷಕರು, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ ಅವರು ವಹಿಸಿದ್ದರು.
ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಮಾನ್ಯ ಶ್ರೀ ಎಲ್. ಭೋಜೇಗೌಡ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಆಗಮಿಸಿ ಕಾರ್ಯಕ್ರಮಕ್ಕೆ ವಿಶೇಷ ಗೌರವವನ್ನು ಹೆಚ್ಚಿಸಿದರು. ತಮ್ಮ ಅಮೂಲ್ಯ ಭಾಷಣದಲ್ಲಿ ಅವರು ಕುಂಭಶ್ರೀ ಸಂಸ್ಥೆಯ ಶೈಕ್ಷಣಿಕ ಸೇವೆ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಂಸ್ಥೆಯು ನೀಡುತ್ತಿರುವ ಕೊಡುಗೆ ಹಾಗೂ “ಆಸರೆ” ವಿದ್ಯಾರ್ಥಿವೇತನ ಯೋಜನೆಯ ಮಹತ್ವವನ್ನು ವಿವರಿಸಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ದಿಕ್ಕು ನೀಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ರಾಘವೇಂದ್ರ ಭಟ್ ಪಿ.ಡಿ., ಕಾರ್ಯದರ್ಶಿಗಳು, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ, ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ಸಂಚಾಲಕರು ಕುಂಭಶ್ರೀ ಸಂಸ್ಥೆ ವೇಣೂರು, ಶ್ರೀ ಬೀಡಾ ಪುಟ್ಟಣ್ಣ ಉದ್ಯಮಿ ಕಳಸ, ಶ್ರೀ ಶ್ರೀಂಗೇಶ್ವರ ಸಿ.ಎಸ್. ಗಣಿತ ಶಿಕ್ಷಕರು ಕೆ.ಪಿ.ಎಸ್. ಕಳಸ, ಶ್ರೀಮತಿ ರಶ್ಮಿ ಕನ್ನಡ ಶಿಕ್ಷಕರು ಸರ್ಕಾರಿ ಶಾಲೆ ಕಳಸ ಹಾಗೂ ಶ್ರೀ ಅರುಣ್ ಪೂಜಾರಿ ಪಿಟಿಎ ಸದಸ್ಯರು ಕುಂಭಶ್ರೀ ಪಿಯು ಕಾಲೇಜು ಉಪಸ್ಥಿತರಿದ್ದರು.
ಅಧ್ಯಕ್ಷೀಯ ಭಾಷಣದಲ್ಲಿ ಶ್ರೀ ಆನಂದ ಕೆ.ಸಿ. ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವವನ್ನು ವಿವರಿಸಿ, “ಆಸರೆ” ಪರೀಕ್ಷೆಯ ಮೂಲಕ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ದೊರೆಯುತ್ತದೆ ಎಂದು ತಿಳಿಸಿದರು. ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕುಂಭಶ್ರೀ ಸಂಸ್ಥೆ ಮಾಡುತ್ತಿರುವ ಸೇವೆಯನ್ನು ಶ್ಲಾಘಿಸಿದರು.
ಈ ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯಲ್ಲಿ ವಿವಿಧ ಶಾಲೆಗಳಿಂದ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು. ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ಭಾಗವಹಿಸಲು ಪ್ರೇರೇಪಿಸಿದ ಎಲ್ಲಾ ಶಿಕ್ಷಕರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಲಾಯಿತು.
ಕಾರ್ಯಕ್ರಮದ ದಿನದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀ ಮನೋಜ್ ಎಸ್., ಶೈಕ್ಷಣಿಕ ಸಲಹೆಗಾರರು, ಕುಂಭಶ್ರೀ ಪಿಯು ಕಾಲೇಜು ಅವರು ಸಮರ್ಥವಾಗಿ ನಿರ್ವಹಿಸಿದರು. ಶ್ರೀ ಅಭಿಲಾಶ್ ಕಾಮತ್ ಉಪನ್ಯಾಸಕರು, ಕುಂಭಶ್ರೀ ಪಿಯು ಕಾಲೇಜು, ವೇಣೂರು ಅವರು ಸ್ವಾಗತ ಭಾಷಣವನ್ನು ನೆರವೇರಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿಂಚನ ಮತ್ತು ಮಾನಸ ಅವರು ಸುಗಮವಾಗಿ ನಿರ್ವಹಿಸಿದರು.
ಕೊನೆಯಲ್ಲಿ, ಈ ಆಸರೆ ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ, ಸಹಕರಿಸಿದ ಶಿಕ್ಷಕರಿಗೆ, ಪೋಷಕರಿಗೆ, ಅತಿಥಿಗಳಿಗೆ ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಕುಂಭಶ್ರೀ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಯಿತು.
“ಶಿಕ್ಷಣವೇ ಶಕ್ತಿ” ಎಂಬ ನಂಬಿಕೆಯೊಂದಿಗೆ ಇಂತಹ ವಿದ್ಯಾರ್ಥಿ ಹಿತೈಷಿ ಕಾರ್ಯಕ್ರಮಗಳನ್ನು ಮುಂದುವರಿಸುವ ಸಂಕಲ್ಪವನ್ನು ಸಂಸ್ಥೆ ವ್ಯಕ್ತಪಡಿಸಿತು.













