Home » Kodi Shri : ರಾಜಕೀಯ ನಾಯಕರ ದುರ್ಮರಣ- ನಿಜವಾಯ್ತು ಕೋಡಿ ಶ್ರೀಗಳ ಭವಿಷ್ಯವಾಣಿ !

Kodi Shri : ರಾಜಕೀಯ ನಾಯಕರ ದುರ್ಮರಣ- ನಿಜವಾಯ್ತು ಕೋಡಿ ಶ್ರೀಗಳ ಭವಿಷ್ಯವಾಣಿ !

0 comments

Kodi Shri: ರಾಜಕೀಯ ವಿಚಾರ, ನೈಸರ್ಗಿಕ ವಿಚಾರ ಹಾಗೂ ಸಾವು ನೋವು, ಮಳೆ ಮತ್ತು ಪ್ರಕೃತಿ ವಿಕೋಪಗಳ ಆದಿಯಾಗಿ ಅನೇಕ ಸಂಗತಿಗಳ ಕುರಿತು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿಯುತ್ತಾರೆ. ಅವರ ಎಲ್ಲ ಭವಿಷ್ಯಗಳು ಕೂಡ ನಿಜವಾಗಿವೆ. ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಬೆಳವಣಿಗೆಗಳು ಶ್ರೀಗಳ ಭವಿಷ್ಯವಾಣಿಯನ್ನು ಮತ್ತೆ ಮುನ್ನೆಲೆಗೆ ತಂದಿವೆ.

ಕೆಲವು ದಿನಗಳ ಹಿಂದೆ ಬೆಳಗಾವಿಯ ಭಕ್ತರ ಮನೆಯೊಂದರಲ್ಲಿ ಮಾತನಾಡಿದ್ದ ಕೋಡಿಶ್ರೀಗಳು, “ದೇಶ ದೇಶಗಳ ನಡುವೆ ಜಿದ್ದು ಹೆಚ್ಚಾಗಲಿದೆ, ರಾಜಕೀಯ ಅರಾಜಕತೆ ಸೃಷ್ಟಿಯಾಗಲಿದೆ ಹಾಗೂ ಜಾಗತಿಕ ಮಟ್ಟದ ಪ್ರಭಾವಿ ನಾಯಕನೊಬ್ಬನ ದುರ್ಮರಣ ಸಂಭವಿಸಲಿದೆ” ಎಂದು ಮಾರ್ಮಿಕವಾಗಿ ನುಡಿದಿದ್ದರು.

ಅಲ್ಲದೆ ಕೆಲವು ಸಮಯಗಳ ಹಿಂದೆ ರಾಷ್ಟ್ರದಲ್ಲಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ನಾಯಕರ ಸಾವಾಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವರ್ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದರು. ಇದೀಗ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತರಾಗಿರುವುದು ಜಗತ್ತನ್ನೇ ಬೆಚ್ಚಿಬೀಳಿಸಿದೆ. 

You may also like