Home » ಪಶ್ಚಿಮ ಬಂಗಾಳದಲ್ಲಿ ಸುವೇಂಧು ಅಧಿಕಾರಿಯ ಪಿಎಗೆ ಗುಂಡಿಕ್ಕಿ ಹತ್ಯೆ!!

ಪಶ್ಚಿಮ ಬಂಗಾಳದಲ್ಲಿ ಸುವೇಂಧು ಅಧಿಕಾರಿಯ ಪಿಎಗೆ ಗುಂಡಿಕ್ಕಿ ಹತ್ಯೆ!!

0 comments

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ  ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಿಜೆಪಿ ನಾಯಕ ಮತ್ತು ರಾಜ್ಯದ ಹೊಸ ಸಿಎಂ ಎಂದೇ ಬಿಂಬಿತವಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರ ನಾಥ್ ರಥ್ ಅವರನ್ನು ಹಾಡಹಗಲೇ ಮಧ್ಯಮಗ್ರಾಮದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ದುಷ್ಕರ್ಮಿಗಳು ಸುವೇಂದು ಅಧಿಕಾರಿಯ ಆಪ್ತನನ್ನು ಗುಂಡಿಟ್ಟು ಕೊಲೆ ಮಾಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

You may also like