ತಮಿಳುನಾಡಿನ ಈ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಉದಯ ನಿಧಿ ಸ್ಟಾಲಿನ್ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಈ ವೇಳೆ ಅವರು ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಸದ್ಯ ಮರಿ ಸ್ಟಾಲಿನ್ ಅವರ ಹೇಳಿಕೆ ತಮಿಳುನಾಡಿನಲ್ಲಿ ಮತ್ತೆ ವಿವಾದದ ಕಿಚ್ಚನ್ನು ಹೊತ್ತಿಸಿದೆ.


ತನ್ನ ಅಪ್ಪನ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿಯೂ 3 ವರ್ಷಗಳ ಹಿಂದೆ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಗೆ ಉದಯನಿಧಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಸಾಕಷ್ಟು ಪರ ವಿರೋಧ ಚರ್ಚೆ ನಡೆದಿತ್ತು. ಆದರೂ ಬುದ್ಧಿ ಕಲಿಯದ ಈ ಮರಿ ಸ್ಟಾಲಿನ್ ಇದೀಗ ಮತ್ತೆ ಸನಾತನ ಧರ್ಮದ ವಿರುದ್ಧ ಗುಡುಗಿದ್ದು ಜನರನ್ನು ಬೇರ್ಪಡಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಡಿಎಂಕೆ ಪಕ್ಷದ ವಿರುದ್ಧ ಗೆದ್ದು ಅಧಿಕಾರಕ್ಕೆ ಏರಿರುವ ನೂತನ ಮುಖ್ಯಮಂತ್ರಿ ಅವರಿಗೆ ಅಭಿನಂದನೆಗಳು. ತಮಿಳು ಏಳ್ಗೆ, ತಮಿಳುನಾಡ ಬಾಳ್ಗೆ, ಜನರನ್ನು ವಿಭಜಿಸುವ ಸನಾತನ ಧರ್ಮ ಕಂಡಿತ ನಿರ್ಮೂಲನೆ ಆಗಬೇಕು. ನಮಸ್ಕಾರ.. ಧನ್ಯವಾದ ಎಂದು ಹೇಳಿಕೆ ಉದಯನಿಧಿ ತಮ್ಮ ಭಾಷಣ ಮುಗಿಸಿದ್ದಾರೆ. ಕೂಡಲೇ ಸಿಎಂ ವಿಜಯ್ ಕೈಮುಗಿದು ಪ್ರತಿಕ್ರಿಯಿಸಿದ್ದಾರೆ. ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದು ಅವರು ಹೇಳಿವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿಜಯ್ ಕ್ರಿಶ್ಚಿಯನ್, ಬಿಜೆಪಿ ವಿರೋಧಿ ಎನ್ನುವ ಆರೋಪದ ನಡುವೆ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
