Home News ದೇವಸ್ಥಾನಕ್ಕೆ ಪ್ರಾರ್ಥನೆ ಮಾಡಲು ತೆರಳಿದ್ದ ಭಕ್ತ ಉಸಿರುಗಟ್ಟಿ ಸಾವು !!

ದೇವಸ್ಥಾನಕ್ಕೆ ಪ್ರಾರ್ಥನೆ ಮಾಡಲು ತೆರಳಿದ್ದ ಭಕ್ತ ಉಸಿರುಗಟ್ಟಿ ಸಾವು !!

Hindu neighbor gifts plot of land

Hindu neighbour gifts land to Muslim journalist

ಪ್ರಾರ್ಥನೆ ಮಾಡಲು ದೇವಸ್ಥಾನಕ್ಕೆ ತೆರಳಿದ್ದ 65 ವರ್ಷದ ಭಕ್ತ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮಥುರಾದ ಬಂಕೆ ಬಿಹಾರಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದ್ದು, ಇವರು ಮಥುರಾದ ನಿವಾಸಿಯಾಗಿದ್ದಾರೆ.

ಶನಿವಾರ ಮಂದಿರದಲ್ಲಿ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಲಕ್ಷ್ಮಣ್ ಅವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದ ವೇಳೆ ವೈದ್ಯರು ಅವರು ಮೃತಪಟ್ಟಿರುವುದಾಗಿ ವೃಂದಾವನದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ತಿಳಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಜನಸಂದಣಿಯ ಮಧ್ಯೆ ಲಕ್ಷ್ಮಣ್ ಅವರಿಗೆ ಉಸಿರುಗಟ್ಟಿದೆ. ನಂತರ ಅವರನ್ನು ತಕ್ಷಣ ಅಲ್ಲಿಂದ ಹೊರಕ್ಕೆ ಕರೆದೊಯ್ದರು. ಆದರೆ ದೇವಸ್ಥಾನದ ಹೊರಗೆ ಬರುವಾಗ ಪ್ರಜ್ಞೆ ತಪ್ಪಿದರು. ಹಾಗಾಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ವೈದ್ಯರು ಲಕ್ಷ್ಮಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಮೃತ ಸಂಬಂಧಿಕರು ಹೇಳಿದ್ದಾರೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಸದ್ಯಕ್ಕೆ ಯಾವುದೇ ಭಕ್ತರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದೆ.