Home News Rakshita Shetty : ‘ಆ ನೋವು ಮನಸ್ಸಿನಲ್ಲಿ ಉಳಿದಿದೆ’ – ಬಿಗ್ ಬಾಸ್ ಬಗ್ಗೆ ...

Rakshita Shetty : ‘ಆ ನೋವು ಮನಸ್ಸಿನಲ್ಲಿ ಉಳಿದಿದೆ’ – ಬಿಗ್ ಬಾಸ್ ಬಗ್ಗೆ ರಕ್ಷಿತಾ ಶೆಟ್ಟಿ ಪೋಸ್ಟ್

Hindu neighbor gifts plot of land

Hindu neighbour gifts land to Muslim journalist

Rakshita Shetty : ಬಿಗ್ ಬಾಸ್ ಕನ್ನಡ- 12ರ ಮೊದಲ ರನ್ನರಪ್ ಆಗಿರುವ ಕರಾವಳಿಯ ಹುಡುಗಿ ರಕ್ಷಿತಾ ಶೆಟ್ಟಿ ಇದೀಗ 15 ದಿನಗಳ ಬಳಿಕ ಬಿಗ್ ಬಾಸ್ ಬಗ್ಗೆ ಭಾವುಕವಾದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಹೌದು, ಇದೀಗ ತಮ್ಮ ಬಿಗ್‌ಬಾಸ್ ಪಯಣದ ಬಗ್ಗೆ ಸುಂದರವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ರಕ್ಷಿತಾ ಶೆಟ್ಟಿ ಹೇಳಿದ್ದೇನು ಅಂತ ನೋಡೋಣ ಬನ್ನಿ.

“ನನ್ನ ಜೀವನದಲ್ಲಿ ಎಂದಿಗೂ ಮರೆತೇ ಹೋಗಲಾರದ ದಿನ – ಬಿಗ್ ಬಾಸ್ ಮನೆಯಲ್ಲಿನ ಕೊನೆಯ ದಿನ. ಮೂರು ತಿಂಗಳುಗಳ ಕಾಲ ಎಲ್ಲವೂ ಇತ್ತು. ಸಂತೋಷ, ಕಣ್ಣೀರು, ನೋವು, ಅಸೂಯೆ, ಪ್ರೀತಿ ಮತ್ತು ಬೆಳವಣಿಗೆ. ಸ್ಪರ್ಧೆಯಾಗಿ ಆರಂಭವಾದ ಈ ಮನೆ, ಸಮಯದೊಂದಿಗೆ ನಿಜವಾದ ಮನೆಯಾಗಿಬಿಟ್ಟಿತು. ಭಾವನೆಗಳು, ಬಾಂಧವ್ಯ ಮತ್ತು ಅನೇಕ ನೆನಪುಗಳಿಂದ ಕಟ್ಟಿದ ಮನೆ ಅದು”

“ಇದು ಕೇವಲ ಒಂದು ಪ್ರಯಾಣವಲ್ಲ, ನಾನು ಇಲ್ಲಿ ಅನೇಕ ಸಂಬಂಧಗಳನ್ನು ಕಟ್ಟಿಕೊಂಡೆ. ಬಹಳಷ್ಟು ಅಣ್ಣಂದಿರು, ಅಮೂಲ್ಯವಾದ ಬಾಂಧವ್ಯಗಳು – ಇವು ಸದಾ ನನ್ನ ಹೃದಯದಲ್ಲಿರುತ್ತವೆ. ಸುದೀಪ್ ಸರ್ ಮನೆಗೆ ಪ್ರವೇಶಿಸಿದ ಕ್ಷಣ ತುಂಬಾ ಸಂತೋಷ ತಂದಿತು. ಆದರೆ ಮನೆ ಬಿಟ್ಟು ಹೊರಡುವ ಸಮಯ… ಅದು ನನ್ನ ಜೀವನದ ಅತ್ಯಂತ ಕಠಿಣ ಮತ್ತು ನೋವಿನ ಕ್ಷಣಗಳಲ್ಲಿ ಒಂದಾಗಿತ್ತು. ಈ ಎಲ್ಲಾ ತಿಂಗಳುಗಳ ನಂತರ ಈ ಮನೆಯನ್ನು ಬಿಟ್ಟು ಹೋಗುವುದು ಸುಲಭವಾಗಿರಲಿಲ್ಲ. ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ. ಕೆಲವು ಸ್ಥಳಗಳು ನಮ್ಮನ್ನು ಬಿಟ್ಟು ಹೋಗಲು ಬಿಡುವುದಿಲ್ಲ ಅವು ನಮ್ಮೊಳಗೇ ಉಳಿದುಬಿಡುತ್ತವೆ”

“ಮನೆಯ ಹೊರಗಿದ್ದ ನನ್ನ ಜನರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿ, ಬೆಂಬಲ, ಪ್ರಾರ್ಥನೆಗಳು ಮತ್ತು ಮತಗಳು ನನಗೆ ಶಕ್ತಿ ನೀಡಿದವು. ನಾನು ಅಷ್ಟು ದೂರ ಈ ಮನೆಯಲ್ಲಿ ಉಳಿಯಲು ನಿಮಗೇ ಕಾರಣ. ಯಾವತ್ತೂ ಕೃತಜ್ಞತೆ. ಯಾವತ್ತೂ ನೆನಪುಗಳು ಎಂದು ಬಿಗ್‌ಬಾಸ್ ಪಯಣದ ಬಗ್ಗೆ ರಕ್ಷಿತಾ ಶೆಟ್ಟಿ ಭಾವುಕವಾಗಿ ಬರೆದುಕೊಂಡು, ಪೋಸ್ಟ್ ಶೇರ್ ಮಾಡಿದ್ದಾರೆ.