Home » ರಾಜ್ಯದ ಪುರುಷ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಸರಕಾರ

ರಾಜ್ಯದ ಪುರುಷ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಸರಕಾರ

0 comments
BMTC

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯದ ಪುರುಷ ಪ್ರಯಾಣಿಕರಿಗೆ ಸಾರಿಗೆ ಬಸ್‌ ಪ್ರಯಾಣ ದರವನ್ನು ಹೆಚ್ಚಿಸುವ ಯೋಜನೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾತನಾಡುತ್ತಾ, ಈಗ ದರ ಏರಿಕೆ ಮಾಡುವ ಪ್ರಶ್ನೆ ಇಲ್ಲ. ಮುಂದಿನ ಪರಿಸ್ಥಿತಿ ನೋಡಿ ನಿರ್ಧಾರ ಮಾಡಲಾಗುತ್ತದೆ. ಕಳೆದ ವರ್ಷದ ಜನವರಿಯಲ್ಲಿ ಬಸ್‌ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿತ್ತು. ನಂತರ ಪ್ರತಿವರ್ಷ ದರ ಪರಿಷ್ಕರಣೆ ಮಾಡುವ ಕುರಿತು ಚರ್ಚೆಗಳು ನಡೆದಿದ್ದವು ಎಂದು ತಿಳಿಸಿದ್ದಾರೆ.

ಜಲಮಂಡಳಿ, ವಿದ್ಯುತ್ ದರ ಹಾಗೂ ಮೆಟ್ರೋ ಮಾದರಿಯಲ್ಲಿ ಬಸ್ ದರ ನಿಗದಿ ಮಾಡುವ ಯೋಚನೆಯೂ ಸರ್ಕಾರದ ಮುಂದೆ ಇತ್ತು. ದರ ಏರಿಕೆ ಕುರಿತು ನಿರ್ಧಾರ ಕೈಗೊಳ್ಳಲು ಸಮಿತಿ ರಚನೆ ಮಾಡಿ, ಅದರ ಶಿಫಾರಸು ಆಧಾರದಲ್ಲಿ ದರ ಪರಿಷ್ಕರಣೆ ಮಾಡಲು ಯೋಜಿಸಲಾಗಿತ್ತು. ಆದರೆ ಇನ್ನೂ ಸಮಿತಿ ರಚನೆಯಾಗದ ಕಾರಣ ಸದ್ಯಕ್ಕೆ ದರ ಏರಿಕೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕನಿಷ್ಠ ಮುಂದಿನ ಆರು ತಿಂಗಳು ಬಸ್ ಪ್ರಯಾಣ ದರ ಹೆಚ್ಚಳದಿಂದ ಪುರುಷ ಪ್ರಯಾಣಿಕರಿಗೆ ನಿರಾಳತೆ ದೊರೆಯಲಿದೆ. ಸಮಿತಿ ರಚನೆಯಾದ ಬಳಿಕ ಮಾತ್ರ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

You may also like