Home News Terrorism: ಸ್ವಾರ್ಥಕ್ಕಾಗಿ ಭಯೋತ್ಪಾದನೆಯನ್ನು ಪೋಷಿಸುವವರು ಶಿಕ್ಷೆ ಅನುಭವಿಸಲೇಬೇಕು – ರಾಜನಾಥ್ ಸಿಂಗ್

Terrorism: ಸ್ವಾರ್ಥಕ್ಕಾಗಿ ಭಯೋತ್ಪಾದನೆಯನ್ನು ಪೋಷಿಸುವವರು ಶಿಕ್ಷೆ ಅನುಭವಿಸಲೇಬೇಕು – ರಾಜನಾಥ್ ಸಿಂಗ್

Hindu neighbor gifts plot of land

Hindu neighbour gifts land to Muslim journalist

Terrorism: ಚೀನಾದಲ್ಲಿ ನಡೆದ SCO ಶೃಂಗಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಭಯೋತ್ಪಾದನೆಯನ್ನು ಪ್ರಾಯೋಜಿಸುವವರು, ಪೋಷಿಸುವವರು ಮತ್ತು ತಮ್ಮ ಸಂಕುಚಿತ ಮತ್ತು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವವರು ಅದರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ” ಎಂದರು.

ಭಯೋತ್ಪಾದನೆಯ ಕೇಂದ್ರಬಿಂದುಗಳು ಇನ್ನು ಮುಂದೆ ಸುರಕ್ಷಿತವಾಗಿರಲ್ಲ ಎಂದು ನಾವು ತೋರಿಸಿದ್ದೇವೆ ಮತ್ತು ಅವುಗಳನ್ನು ಗುರಿಯಾಗಿಸಲು ನಾವು ಹಿಂಜರಿಯುವುದಿಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಚೀನಾದ ವಿದೇಶಾಂಗ ಸಚಿವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿಯಾಗಿದ್ದಾರೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು SCO ಭದ್ರತಾ ಮಂಡಳಿ ಕಾರ್ಯದರ್ಶಿಗಳ 20ನೇ ಸಭೆಯಲ್ಲಿ ಭಾಗವಹಿಸಲು ಬೀಜಿಂಗ್‌ಗೆ ಭೇಟಿ ನೀಡಿದ್ದು, ಅಲ್ಲಿ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು.

ಸಭೆಯ ಸಮಯದಲ್ಲಿ, ಎರಡೂ ಕಡೆಯವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಪರಿಶೀಲಿಸಿದರು ಮತ್ತು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳ ಒಟ್ಟಾರೆ ಅಭಿವೃದ್ಧಿಯನ್ನು ಉತ್ತೇಜಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಇದನ್ನೂ ಓದಿ;Mangaluru: ಕಟೀಲು ದೇವಾಲಯಕ್ಕೆ ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಭೇಟಿ