

Bengaluru : ತಮ್ಮ ಕಾರಿಗೆ ಆಂಬುಲೆನ್ಸ್ ಟಚ್ ಆಗಿದ್ದಕ್ಕೆ ಪುಂಡರ ಗುಂಪೊಂದು ರೋಗಿಯನ್ನು ಕರೆತರಲು ಎಮರ್ಜೆನ್ಸಿ ಸೈರನ್ ಹಾಕಿ ಹೊರಟಿದ್ದ ಆಂಬ್ಯುಲೆನ್ಸ್’ನ್ನು ಅಡ್ಡಗಟ್ಟಿ, ನಡುರಸ್ತೆಯಲ್ಲಿ ರಂಪಾಟ ನಡೆಸಿದ್ದಾರೆ.
ಬೆಂಗಳೂರಿನ ಆನೇಕಲ್ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದೆ. ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ. ಪುಂಡರ ಗುಂಪು ಸುಮಾರು ಹದಿನೈದು ನಿಮಿಷಗಳ ಕಾಲ ಆಯಂಬುಲೆನ್ಸ್ ತಡೆದು ನಿಲ್ಲಿಸಿದ್ದು, ಆಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರೋಗಿಗಳನ್ನು ಸಾಗಿಸುವ ತುರ್ತು ವಾಹನಕ್ಕೆ ಅಡ್ಡಿಪಡಿಸಿ, ಅದರ ಸಿಬ್ಬಂದಿಗೆ ನಿಂದಿಸಿದ ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
https://x.com/i/status/2025771746012594196
