Home News ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಬಂಟ್ವಾಳದ ದೈಪಲದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು.

ಮೃತರು ತಾಯಿ,ಪತ್ನಿ,ಓರ್ವ ಪುತ್ರ,ಪುತ್ರಿಯನ್ನು ಅಗಲಿದ್ದಾರೆ.

ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು.ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4 ಕೃತಿಗಳನ್ನು ಡಿ.ಎಂ.ಕುಲಾಲ್ ರಚಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸದಲ್ಲಿಯೇ “ಚಾವಡಿ ಪುರಸ್ಕಾರ” ನೀಡಿ ಗೌರವಿಸಲಾಗಿತ್ತು.

ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ,ಬಂಟ್ವಾಳ ಕುಲಾಲ ಸಮಾಜ ಸುಧಾರಕ ಸಂಘದಲ್ಲಿವಸದಸ್ಯ,ಪದಾಧಿಕಾರಿಯಾಗಿ,ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲಿ ಸಕ್ರೀಯವಾಗಿದ್ದರು.

ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಾಗಿ ಕೆಲ ಸಮಯಗಳ ಕಾಲ ಗುರುತಿಸಿದ್ದರು.

ಸಂತಾಪ: ಡಿ.ಎಂ.ಕುಲಾಲ್ ಅವರ ನಿಧನಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪಾಡಿ, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೆ.ಕೆ.ಪೂಂಜಾ, ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.