ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮಂತ್ರಿ ಸ್ಥಾನ ಖಚಿತವಾಗುತ್ತಿದ್ದಂತೆ ಸಭಾಪತಿ ಯು ಟಿ ಖಾದರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಯು.ಟಿ.ಖಾದರ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.


ಕಾಂಗ್ರೆಸ್ ಹೈಕಮಾಂಡ್ನಿಂದ ಅಧಿಕೃತ ಸೂಚನೆ ದೊರಕುತ್ತಿದ್ದಂತೆ ಖಾದರ್ ಅವರು ಉಪಸಭಾಪತಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಖಾದರ್ ಅವರು ಸಚಿವರಾಗಿ ಅಧಿಕಾರಿ ವಹಿಸಿಕೊಳ್ಳಲ್ಲಿದ್ದಾರೆ. ಹೈಕಮಾಂಡ್ನಿಂದ ಅಂತಿಮ ಪಟ್ಟಿ ಬಿಡುಗಡೆಯಾದಾಗ ಅಧಿಕೃತವಾಗಿ ಯಾವ ಖಾತೆ ಎನ್ನುವುದು ತಿಳಿದುಬರಲಿದೆ.
