HomeNewsUdupi: ಉಡುಪಿ: ಸಿದ್ದಾಪುರದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆ!

Udupi: ಉಡುಪಿ: ಸಿದ್ದಾಪುರದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆ!

Hindu neighbor gifts plot of land

Hindu neighbour gifts land to Muslim journalist

Udupi: ಉಡುಪಿ (Udupi) ಜಿಲ್ಲೆ ಕುಂದಾಪುರ ತಾಲೂಕು ಸಿದ್ದಾಪುರದ, ಸಿದ್ದಾಪುರ-ಹೊಸಂಗಡಿ ರೋಟರಿ ಕ್ಲಬ್, ಸಣ್ಣಯ್ಯ ಯಡಿಯಾಳ ಸಭಾಭವನದ ಮುಂಭಾಗವಿರುವ, ಅರವಿಂದ ಶೆಟ್ಟಿಯವರ ಸೈಟ್ ನಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ.

ಈ ಕಲ್ಲಿನ ಮಾಹಿತಿಯು, ಸಿದ್ದಾಪುರ ವಾಸುಕಿ ಕ್ಲಿನಿಕ್ ಡಾ. ಜಗದೀಶ್ ಶೆಟ್ಟಿಯವರಿಂದ ತಿಳಿದು ಬಂದ ಹಿನ್ನಲೆಯಲ್ಲಿ ತುಮಕೂರು ವಿ.ವಿಯ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ವೈಶಾಲಿ ಜಿ. ಆರ್ ಸಿದ್ದಾಪುರ, ಇವರು ಸ್ಥಳಕ್ಕೆ ಭೇಟಿ ನೀಡಿ, ಮುಳ್ಳು ಗಿಡಗಳಿಂದ ಅವರಿಸಿದ್ದ ಈ ಕಲ್ಲನ್ನು, ರೋಟರಿ ಮಾಜಿ ಅಧ್ಯಕ್ಷರಾಗಿದ್ದ ಡಿ ನಾಗೇಂದ್ರ ಯಡಿಯಾಳ ಹಾಗೂ ಶಿಕ್ಷಕಿ ಕೃಷ್ಣವೇಣಿಯವರ ಸಹಾಯದಿಂದ ಈ ಕಲ್ಲಿನ ಸುತ್ತಮುತ್ತ ಸ್ವಚ್ಛಗೊಳಿಸಿ ಕಲ್ಲನ್ನು ಪರೀಕ್ಷಿಸಲಾಗಿ ಈ ಕಲ್ಲಿನ ಮೇಲ್ಭಾಗದಲ್ಲಿ ಸೂರ್ಯ ಚಂದ್ರ ಹಾಗೂ ಅದರ ಕೆಳಭಾಗದಲ್ಲಿ ಶಿವಲಿಂಗದ ಕೆತ್ತನೆ ಇರುವುದು ಕಂಡು ಬಂದಿದೆ. ಈ ಕಲ್ಲು ಸುಮಾರು ಎರಡುವರೆ ಅಡಿ ಎತ್ತರವಿದ್ದು, ಒಂದು ಅಡಿ ಅಗಲವಿದೆ, ಸುಮಾರು ಎರೆಡು ಅಡಿ ಆಳ ಕೆಳಗೆ ಇದ್ದಿರಬಹುದು. ಈ ಭಾಗದಲ್ಲಿ ಈ ಕಲ್ಲನ್ನು ಶಿಲೆಕಲ್ಲು ಎಂದು ಕರೆಯುತ್ತಾರೆ.

ಶಾಸನ ತಜ್ಞರಾದ ಪ್ರೊ. ಎಂ ಕೊಟ್ರೇಶ್, ಅಧ್ಯಕ್ಷರು, DOSR ಇತಿಹಾಸ ಮತ್ತು ಪುರಾತತ್ವ ವಿಭಾಗ ತುಮಕೂರು ವಿ.ವಿ ಇವರಿಗೆ ತಿಳಿಸಲಾಗಿ,
ಈ ಕಲ್ಲಿನಲ್ಲಿ ಯಾವುದೇ ಬರವಣಿಗೆ ಕಂಡುಬಂದಿಲ್ಲ. ತಮ್ಮ ಗಡಿಗಳನ್ನು ಗುರುತಿಸಲು ಶೈವರು ಲಿಂಗ ಮುದ್ರೆ ಕಲ್ಲನ್ನು, ವೈಷ್ಣವರು ವಾಮನ ಮುದ್ರೆ ಕಲ್ಲನ್ನು ಹಾಗೂ ಜೈನರು ಮುಕ್ಕೊಡೆ ಕಲ್ಲುಗಳನ್ನು ಹಾಕಿಸುತ್ತಿದ್ದರು. ಇದು ಲಿಂಗ ಮುದ್ರೆ ಕಲ್ಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

Most Popular

Recent Comments