Home » ಉಡುಪಿ: ʼಸಮಾಧಾನ ಮಹೋತ್ಸವʼ ವಿರೋಧಿಸಿ ಪ್ರತಿಭಟನೆ, ಪ್ರಕರಣ ದಾಖಲು

ಉಡುಪಿ: ʼಸಮಾಧಾನ ಮಹೋತ್ಸವʼ ವಿರೋಧಿಸಿ ಪ್ರತಿಭಟನೆ, ಪ್ರಕರಣ ದಾಖಲು

0 comments

ಉಡುಪಿ: ಕ್ರಿಶ್ಚಿಯನ್‌ ಪಿಯು ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ʼಸಮಾಧಾನ ಮಹೋತ್ಸವʼ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಫೇಲೋಶಿಪ್‌ ಆಫ್‌ ಉಡುಪಿ ಡಿಸ್ಟ್ರಿಕ್ಟ್‌ ಚರ್ಚಸ್‌ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮಕ್ಕೆ ಮೋಹನ್‌ ಸಿ ಲಾಜರಸ್‌ ಅವರನ್ನು ಆಹ್ವಾನಿಸಿರುವುದಕ್ಕೆ ಹಿಂದೂ ಜಾಗರಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅಡ್ಡಿಯಾಗುವ ಆತಂಕದಿಂದ ಆಯೋಜಕರು ಹೈಕೋರ್ಟ್‌ ಮೆಟ್ಟಿಲೇರಿದ್ದು, ಹೈಕೋರ್ಟ್‌ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್‌ ರಕ್ಷಣೆ ನೀಡುವಂತೆ ಆದೇಶ ನೀಡಿತ್ತು. ಹಾಗಾಗಿ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಿತ್ತು.

ಹೈಕೋರ್ಟ್‌ ಆದೇಶದ ನಡುವೆಯೂ, ಮಾ. 20ರಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ನೇತೃತ್ವದಲ್ಲಿ 38ಕ್ಕೂ ಹೆಚ್ಚು ಕಾರ್ಯಕರ್ತರು ಗೋವಿಂದ ಕಲ್ಯಾಣ ಮಂಟಪದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಕ್ರಮವಾಗಿ ಕೂಟ ಸೇರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಡೆದಿದ್ದು, ಪ್ರತಿಭಟನಕಾರರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like