Home News ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ | ಇಬ್ಬರು ಪಿಂಪ್‌ಗಳ ಬಂಧನ

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ | ಇಬ್ಬರು ಪಿಂಪ್‌ಗಳ ಬಂಧನ

Hindu neighbor gifts plot of land

Hindu neighbour gifts land to Muslim journalist

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳಮುಖಿಯರ ಅನೈತಿಕ ದಂಧೆ ನಡೆಯುತ್ತಿದೆ ಎಂದು ಸಾರ್ವಜನಿಕರು ಪೋಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಹಾಕೇ ಮಚ್ಚಿಂದ್ರ ಅವರು ಈ ಬಗ್ಗೆ ಕಾರ್ಯಾಚರಣೆ ನಡೆಸಿ, ತಡರಾತ್ರಿ ಇಬ್ಬರು ಪಿಂಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ಬಸ್ ನಿಲ್ದಾಣದ ಬಳಿ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು ಅಲ್ಲಿ ಬರುವ ವಾಹನಗಳನ್ನು ಅಡ್ಡ ಹಾಕಿ, ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗೂ ದಾರಿದೀಪವನ್ನು ಒಡೆದು ಹಾಕಿದ್ದಲ್ಲದೆ, ಜನರಿಂದ ಹಣ ವಸೂಲಿ ಮಾಡುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದ್ದರು.

ದೂರಿನ ಮೇರೆಗೆ ಎಸ್ಪಿ ಕಾರ್ಯಾಚರಣೆಗೆ ನಡೆಸುತ್ತಿದ್ದರು. ಈ ವೇಳೆ ಸ್ಥಳದಲ್ಲಿ ಇರುವುದು ಪೊಲೀಸ್ ಅಧೀಕ್ಷಕರು ಎಂದು ತಿಳಿಯದೆ ಮಂಗಳಮುಖಿಯರು ಅವರ ಜೊತೆಗೆ ವಾಗ್ವಾದ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಎಸ್ಪಿ ಅವರನ್ನು ನಿಂದಿಸಿದ್ದಾರೆ ಎನ್ನಲಾಗಿದೆ.

ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ, ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅವರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.