Home » ಉಜಿರೆ: ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸಮಯ ಪಾಲನೆ ಮತ್ತು ಬದುಕಿನ ಗುರಿ ನಿರ್ಧಾರ’ ತರಬೇತಿ ಕಾರ್ಯಗಾರ

ಉಜಿರೆ: ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸಮಯ ಪಾಲನೆ ಮತ್ತು ಬದುಕಿನ ಗುರಿ ನಿರ್ಧಾರ’ ತರಬೇತಿ ಕಾರ್ಯಗಾರ

0 comments

ಉಜಿರೆ: ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನ (HRD)ಸಮಿತಿ ಅಡಿಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಪ್ರೇರಣದಾಯಕ ಮಾರ್ಗದರ್ಶನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಎಸ್.ಡಿ.ಎಂ. ಪದವಿ ಕಾಲೇಜಿನ ಮನ:ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ಸುಧೀರ್ ಕೆ. ವಿ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು.

ಜೀವನದಲ್ಲಿ ಗೆಲುವನ್ನು ಸಾಧಿಸಲು ಸ್ಪೂರ್ತಿದಾಯಕ ಆಲೋಚನೆಗಳು ಮತ್ತು ನಿರಂತರ ಪ್ರಯತ್ನಗಳು ಅತ್ಯಗತ್ಯ. ನಿಮ್ಮ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಿಕೊಳ್ಳಬೇಕು

ನಿಮ್ಮ ಸಾಮರ್ಥ್ಯದ ಮೇಲೆ ನಿಮಗಿರಬೇಕಾದ ನಂಬಿಕೆಯೇ ನಿಮ್ಮ ದೊಡ್ಡ ಶಕ್ತಿ. ನಿಮ್ಮನ್ನು ನೀವು ನಂಬಿದರೆ ಅಸಾಧ್ಯವಾದದ್ದು ಯಾವುದೂ ಇಲ್ಲವೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿ, ಉಪಸ್ಥಿತರಿದ್ದರು. ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಚೈತ್ರ ಪ್ರಭು ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕ ಪಾರ್ಶ್ವನಾಥ ಹೆಗ್ಡೆ ನಿರೂಪಿಸಿ, ವಂದಿಸಿದರು.

banner

You may also like