Home News ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್‌: ಹರೀಶ್ ಪೂಂಜ

ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್‌: ಹರೀಶ್ ಪೂಂಜ

MLA Harish Poonja:

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ ಬೆಳವಣಿಗೆಯ ಮುನ್ಸೂಚನೆ ನೀಡಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಬಯೋಫಾರ್ಮ್ ಮೂಲಕ ಆರೋಗ್ಯ ಕ್ಷೇತ್ರಕ್ಕೆ 10 ಸಾವಿರ ಕೋಟಿ ಮೀಸಲು ದೇಶದ ಸ್ವಾಸ್ಥ ಕ್ಷೇತ್ರದಲ್ಲಿ ಹೊಸ ಆಯಾಮ ನೀಡಲಿದ್ದು ಖಾದಿ ಹಾಗೂ ಕೈ ಮಗ್ಗಕ್ಕೆ ಪ್ರೋತ್ಸಾಹ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಸಾಲದ ಗ್ಯಾರಂಟಿಯೊಂದಿಗೆ ಉತ್ತೇಜನ ರಫ್ತುವಿಗೆ ಪೂರಕವಾಗಿ ಜಲಮಾರ್ಗ ನಿರ್ಮಾಣದ ಯೋಜನೆ ಎಐ ತಂತ್ರಜ್ಞಾನ (ಕೃತಕ ಬುದ್ಧಿವಂತಿಕೆ) ಅಭಿವೃದ್ಧಿಗೆ ಒತ್ತು ದೇಶದ ಕೈಗಾರಿಕಾ ಉದ್ಯೋಗ ಕ್ಷೇತ್ರದಲ್ಲಿ ಬೆಳವಣಿಗೆಯಾಗಲಿದೆ.

ಬಂಡವಾಳ ವೆಚ್ಚಕ್ಕೆ ಹೆಚ್ಚು ಅನುದಾನ ಮೀಸಲಿರಿಸಿದ್ದು ಮೂಲಭೂತ ಸೌಕರ್ಯಕ್ಕೆ ಭಾರೀ ಆದ್ಯತೆ ನೀಡಿದಂತಾಗಿದೆ. ಮಹಿಳೆಯರಿಗೆ ಉದ್ಯಮಕ್ಕೆ ಪ್ರೋತ್ಸಾಹಿಸುವ ಲಕ್ ಪಥಿ ದೀದಿ ಯೋಜನೆ ಜನರ ಆಶೋತ್ತರಕ್ಕೆ ಪ್ರತಿಬಿಂಬಿತವಾದ ಬಜೆಟ್ ಆಗಿದೆ.

ವಿಕಸಿತ ಭಾರತದ ಬುನಾದಿಯ ಮೇಲೆ ಮಂಡಿಸಲ್ಪಟ್ಟ ಮುಂಗಡ ಪತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಪ್ರಾಯೋಜಕತ್ವದ ಮೆಡಿಕಲ್ ಹಬ್ ಸ್ಥಾಪನೆ ಮಾರಣಾಂತಿಕ ಕಾಯಿಲೆಗಳ ಔಷಧಿಗಳ ತೆರಿಗೆ ಕಡಿತ ಖಂಡಿತವಾಗಿಯೂ ಶ್ರೀ ಸಾಮಾನ್ಯನಿಗೆ ಪ್ರಯೋಜನಕಾರಿಯಾಗಲಿದೆ.

ವಿಶೇಷವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು-ಚೆನ್ನೈ, ಬೆಂಗಳೂರು- ಹೈದರಾಬಾದ್ ಹೈಸ್ಪೀಡ್ ರೈಲು ಘೋಷಣೆ ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್ ಮಾರ್ಗ ಅಭಿವೃದ್ಧಿ ಯೋಜನೆ ಘೋಷಣೆ ಸ್ಥಳೀಯ ಆರ್ಥಿಕತೆಯ ಅಭಿವೃದ್ಧಿಗೆ ಪೂರಕವಾಗಲಿದ್ದು ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ನೀಡಿದ ಮುಂಗಡ ಪತ್ರಕ್ಕೆ ಪ್ರದಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರವರಿಗೆ ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.