ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿ ಪಿ ರಾಧಾಕೃಷ್ಣನ್ ರವರು ಮೇ 31 ರಂದು ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸಿದ ಅವರು ಉಪರಾಷ್ಟ್ರಪತಿಗಳು ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.


ಪ್ರಧಾನ ಅರ್ಚಕರು ಅವರಿಗೆ ತೀರ್ಥ ಪ್ರಸಾದ ವಿತರಿಸಿದರು.ಅನ್ನಪೂರ್ಣ ಛತ್ರಕ್ಕೆ ಭೇಟಿಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದಾನ ಕೇಂದ್ರ ಅನ್ನಪೂರ್ಣ ಛತ್ರಕ್ಕೆ ಉಪರಾಷ್ಟ್ರಪತಿಗಳು ಭೇಟಿಯಾದರು. ಬೋಜನಾಲಯದ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ದರ್ಶನದ ಬಳಿಕ ಧರ್ಮಸ್ಥಳದ ರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಕೆಲಕಾಲ ಅವರೊಂದಿಗೆ ಚರ್ಚೆ ನಡೆಸಿದ ಉಪರಾಷ್ಟ್ರಪತಿಗಳು, ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ,ಸಾಮಾಜಿಕ, ಶೈಕ್ಷಣಿಕ,ಆರೋಗ್ಯ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು. ಈ ವೇಳೆ, ಡಾ.ಹೇಮಾವತಿ ವೀ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಜೊತೆಗಿದ್ದರು.ದೇವರ ದರ್ಶನದ ವೇಳೆ ರಾಜ್ಯಪಾಲ ತಾವರ್ ಚಂದ್ ಗೆಹೋಟ್, ಸಂಸದ ಬ್ರಿಜೇಶ್ ಚೌಟ, ರಾಜ್ಯಸಭೆಯ ಕಾರ್ಯದರ್ಶಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಜೊತೆಗಿದ್ದರು.ನಂತರ ಉಪರಾಷ್ಟ್ರಪತಿಗಳು ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
