ಸದ್ಯದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಯಲಿದೆ. ಆದರೆ ಈ ಚುನಾವಣೆಗೆ ತಮಿಳುನಾಡು ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷದಿಂದ ಸ್ಪರ್ಧಿಗಳು ಕಣಕ್ಕೆ ಇಳಿಯುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ.


ಯಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 5 ನಗರ ಪಾಲಿಕೆಗಳಿಗೆ 2026ರ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ತಮಿಳು ಮತದಾರರು ಇರುವ ವಾರ್ಡ್ಗಳಲ್ಲಿ ಟಿವಿಕೆ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ. ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗ್ತಿದೆ. ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಗೆದ್ದ ಕ್ರೇಜ್ ಬಳಸಿಕೊಂಡು ಇಲ್ಲಿ ಸ್ಪರ್ಧಿಗಳು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ
ತಮಿಳು ನಟನ ಪಕ್ಷ ಕರ್ನಾಟಕದಲ್ಲಿ ನೆಲೆ ಕಂಡುಕೊಂಡರೆ ಹೇಗೆ ಎನ್ನುವ ಚರ್ಚೆ ಆರಂಭವಾಗಿದೆ. ಇದೇ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಬೆಂಗಳೂರಿನ ಕೆಲ ವಾರ್ಡ್ಗಳಲ್ಲಿ ತಮಿಳು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಂತಹ ಕಡೆ ಟಿವಿಕೆ ಪಕ್ಷದಿಂದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದರೆ ಮುಂದೆ ಫಲಿತಾಂಶ ಏನಾಗಬಹುದು ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.
