Home News ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ

ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ

Hindu neighbor gifts plot of land

Hindu neighbour gifts land to Muslim journalist

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುದ್ದುಪದವು ನಿವಾಸಿ ಎಂ. ಕೃಷ್ಣ ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್ ಕುಮಾರ್ ಟಿ, ಕಾಸರಗೋಡು ನಿವಾಸಿ ಚಂದ್ರಶೇಖರ ಸಿ ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ಅಳಿಕೆ ಬರೆಂಗೊಡಿ ತರವಾಡು ಮನೆಯ ವಿಚಾರದಲ್ಲಿ ದೂರವಾಣಿ ಕರೆ ಮಾಡಿ ಜಾಗ ನೋಡಲು ಬರುವುದಾಗಿ ಹೇಳಿದ್ದು, ದಾರಿ ಹೇಳುವ ನಿಟ್ಟಿನಲ್ಲಿ ರಸ್ತೆಗೆ ಬರ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಬರಂಗೋಡಿ ನಿವಾಸಿ ರಾಜೀವ ಬಿ. ಶಾರದಾ ವಿಹಾರ -ಬೈರಿಕಟ್ಟೆ ರಸ್ತೆಯ ಬರೆಂಗೋಡಿಯಲ್ಲಿ ಇದ್ದಾಗ ಓಮ್ಮಿ ಕಾರಿನಲ್ಲಿ ಆಗಮಿಸಿದ ಅಪರಿಚಿತರು ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಾರೆ. ಈ ಸಮಯ ಬೈಕ್ ಆಗಮಿಸಿದ್ದನ್ನು ಕಂಡು ಅಪರಿಚಿತರು ಪಲಾಯನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.